Select Your Language

Notifications

webdunia
webdunia
webdunia
webdunia

ರಾಜಕಾರಣದ ಆಗುಹೋಗುಗಳನ್ನು ದೂರದಿಂದಲೇ ನೋಡುತ್ತಿದ್ದೇನೆ- ಎಸ್.ಎಂ ಕೃಷ್ಣ

ರಾಜಕಾರಣದ ಆಗುಹೋಗುಗಳನ್ನು ದೂರದಿಂದಲೇ  ನೋಡುತ್ತಿದ್ದೇನೆ- ಎಸ್.ಎಂ ಕೃಷ್ಣ
ಕೋಲಾರ , ಭಾನುವಾರ, 3 ಫೆಬ್ರವರಿ 2019 (18:57 IST)
ಕೋಲಾರ : ರಾಜ್ಯ ರಾಜಕಾರಣದ ಪ್ರಸಕ್ತ ಬೆಳವಣಿಗೆಗಳನ್ನು ದೂರದಿಂದಲೇ ನೋಡುತ್ತಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಹೇಳಿದ್ದಾರೆ.


ನಗರದಲ್ಲಿಂದು ಕ್ಷೀರ ಕ್ರಾಂತಿಯ ಹರಿಕಾರ ಎಂ.ವಿ.ಕೃಷ್ಣಪ್ಪನವರ ಜನ್ಮ ಶತಮಾನೋತ್ಸವದಲ್ಲಿ ಭಾಗವಹಿಸಿದ್ದ ಅವರು, ಕಾರ್ಯಕ್ರಮಕ್ಕೂ ಮೊದಲು ಸುದ್ದಿಗಾರರೊಂದಿಗೆ ಮಾತನಾಡಿ, ‘ನನಗೆ ನನ್ನ ಕೈ ನೋಡುವುದಕ್ಕೆ ಬರುವುದಿಲ್ಲ. ಇನ್ನು ಸಮ್ಮಿಶ್ರ ಸರ್ಕಾರದ ಭವಿಷ್ಯ ನನಗೆ ಗೊತ್ತಿಲ್ಲ. ರಾಜಕಾರಣದಲ್ಲಿ ನಾನು ಅಷ್ಟು ಸಕ್ರಿಯವಾಗಿಲ್ಲ, ದೂರದಿಂದ ನೋಡುತ್ತಿದ್ದೇನೆ’ ಎಂದು ಹೇಳಿದ್ದಾರೆ.


ಆಪರೇಷನ್ ಕಮಲದ ಬಗ್ಗೆ ಕೇಳಿದ್ದಕ್ಕೆ ‘ನನಗೆ ಕಮಲ ಮಾತ್ರ ಗೊತ್ತು ಆಪರೇಷನ್ ಗೊತ್ತಿಲ್ಲ’ ಎಂದು ಅವರು  ಹೇಳಿದ್ದಾರೆ . ಹಾಗೇ ಮಂಡ್ಯದಲ್ಲಿ ಚುನಾವಣೆಯ ಅಭ್ಯರ್ಥಿಯನ್ನ ಅಲ್ಲಿನ ಬಿಜೆಪಿ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ .ಸುಮಲತಾ ಅಭ್ಯರ್ಥಿ ಎನ್ನುವ ಬಗ್ಗೆ ಮಾಹಿತಿ ಇಲ್ಲ ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

JDS ಅಭ್ಯರ್ಥಿಗಳನ್ನ ನೋಡಿ ಜನ ಮತ ಹಾಕಿಲ್ಲ ಎಂದವರಾರು?