Webdunia - Bharat's app for daily news and videos

Install App

20 ವರ್ಷದಲ್ಲಿ ಇಂತಹ ಘಟನೆ ನಡೆದಿರಲಿಲ್ಲ: ಮೂರು ಸಾವಿರ ಮಠದ ಸ್ವಾಮೀಜಿ

Webdunia
ಬುಧವಾರ, 20 ಏಪ್ರಿಲ್ 2022 (14:40 IST)

ಹುಬ್ಬಳ್ಳಿ - ಧಾರವಾಡದಲ್ಲಿ ಶಾಂತಿ ನೆಲೆಸಬೇಕಾಗಿರುವುದು ತೀರ ಅಗತ್ಯತೆ ಇದೆ ಎಂದು ಮೂರುಸಾವಿರಮಠದ ಶ್ರೀ ಗುರುಸಿದ್ದ ರಾಜಯೋಗಿಂದ್ರ ಮಹಾಸ್ವಾಮಿಗಳು ಹಳೇ ಹುಬ್ಬಳ್ಳಿ ಗಲಭೆ ಹಿನ್ನೆಲೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.

ಏ.17 ರಂದು ಹಳೇಹುಬ್ಬಳ್ಳಿ ಗಲಭೆಯಲ್ಲಿ ಗಾಯಗೊಂಡಿದ್ದ ಸಂಚಾರಿ ಪೋಲಿಸ್ ಇನ್ಸ್ಪೆಕ್ಟರ್ ಕಾಡದೇವರಮಠ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ನಂತರ ಮಾತನಾಡಿದ ಅವರು, ಕಳೆದ 20 ವರ್ಷಗಳಿಂದ ಇಂತಹ ಯಾವ ಘಟನೆಗಳು ನಡೆದಿಲ್ಲ. ಆದರೆ ಮೊನ್ನೆ ನಡೆದ ಘಟನೆ ತುಂಬಾ ಆಘಾತಕಾರಿಯಾದ ಘಟನೆಯಾಗಿದೆ. ಇಂತಹ ಸಂಭವಿಸಲು ಎರಡು ಕಡೆಗಳಲ್ಲಿ ಏನೂ ಸಮಸ್ಯೆ ಆಗಿರುತ್ತದೆ. ಇಂತಹ ಸಮಸ್ಯೆಗಳು ಯಾವ ಕಾಲಕ್ಕೂ ಆಗಬಾರದು. ನಾವೆಲ್ಲರೂ ಕೂಡಿ ಬಾಳಬೇಕು ಎಂದರು.

ನಾವೆಲ್ಲರೂ ದೇಶವನ್ನು ಬಿಟ್ಟು ಹೋಗಲು ಆಗುವುದಿಲ್ಲ. ಹಿಂದೂಗಳು ಹೋಗಲು ಆಗುವುದಿಲ್ಲ, ಇಸ್ಲಾಂ ಧರ್ಮಿಯರು ಹೋಗಲು ಆಗುವುದಿಲ್ಲ. ಕೂಡಿ ಬಾಳಬೇಕು. ಆದ್ದರಿಂದ ನಾವೆಲ್ಲರೂ ಶಾಂತಿಯಿಂದ ಇರಬೇಕು. ಅವರ ಹಬ್ಬ ಬಂದಾಗ ನಾವು ಶಾಂತಿಯಿಂದ ಇರಬೇಕು. ನಮ್ಮ ಹಬ್ಬ ಬಂದಾಗ ಅವರು ಶಾಂತಿಯಿ.ದ ಇರಬೇಕು. ಇದೇ ಘಟನೆಯನ್ನು ಸಾಕ್ಷಿಯಾಗಿರಿಕೊಂಡು ಮುಂದೆ ಬರುವ ರಮ್ಜಾನ್ ಹಬ್ಬದಲ್ಲಿ ಯಾವುದೇ ರೀತಿಯ ಗಲಾಟೆ ಆಗಬಾರದು. ನಾವೆಲ್ಲರೂ ಶಾಂತಿ, ಸೌಹಾರ್ಧತೆಯಿಂದ ನಡೆದುಕೊಳ್ಳಬೇಕು. ಇಡೀ ಜಗತ್ತಿಗೆ ಮಾದರಿಯಾದ ನಡಾವಳಿಯನ್ನು ತೋರಿಸಬೇಕಾಗಿದೆ. ಮತ್ತೊಮ್ಮೆ ಇಂತಹ ಘಟನೆಗಳು ಹುಬ್ಬಳ್ಳಿ-ಧಾರವಾಡದಲ್ಲಿ ನಡೆಯಬಾರದು ಎಂದು ಶ್ರೀಗಳು ಮನವಿ ಮಾಡಿದರು.‌

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಯುವಕನ ಹತ್ಯೆ ಪ್ರಕರಣ: ದ.ಕನ್ನಡ ಜಿಲ್ಲೆಯಲ್ಲಿ ಮೂರು ದಿನ ನಿಷೇಧಾಜ್ಞೆ

Operation Sindoor: ಐಪಿಎಲ್‌ ಫೈನಲ್‌ನಲ್ಲಿ ಗೌರವಕ್ಕೆ ಒಳಗಾಗುವ ಮೂವರು ದೇಶದ ಅಧಿಕಾರಿಗಳು ಇವರೇ

ರಾಜ್ಯದಲ್ಲಿ ಕೊತ್ವಾಲ್‌ ಶಿಷ್ಯಂದಿರು ವಿಜೃಂಭಿಸುತ್ತಿದ್ದಾರೆ: ಜೆಡಿಎಸ್‌

ಪಾಕಿಸ್ತಾನ ಪರ ಬೇಹುಗಾರಿಕೆ: ಪಾಕ್‌ರೊಂದಿಗಿನ ಜ್ಯೋತಿ ಮಲ್ಹೋತ್ರಾ ಲಿಂಗ್ ಕೇಳಿದ್ರೆ ದಂಗಾಗ್ತೀರಾ

ಕನ್ನಡ ಭಾಷೆಗೆ ಅಪಮಾನ ಮಾಡದಿರಿ, ಇದನ್ನು ಸಹಿಸಲು ಅಸಾಧ್ಯ: ಸಿಟಿ ರವಿ

ಮುಂದಿನ ಸುದ್ದಿ
Show comments