Webdunia - Bharat's app for daily news and videos

Install App

ಹಿಂದೂ ದೇವತೆಗಳನ್ನು ನಿಂದಿಸಿಲ್ಲ: ಸಚಿವ ಮುರುಗೇಶ್ ನಿರಾಣಿ

Webdunia
ಗುರುವಾರ, 19 ಆಗಸ್ಟ್ 2021 (14:26 IST)
ಹಿಂದೂ ದೇವತೆಗಳಿಗೆ ಆಕ್ಷೇಪರ್ಹ ಪದ ಬಳಕೆ ಮಾಡಿರುವ ಆರೋಪದ ಕುರಿತಾಗಿ ತಮ್ಮ ವಿರುದ್ಧ ತನಿಖೆಗೆ ನ್ಯಾಯಾಲಯ ಆದೇಶ ನೀಡಿರುವ ಕಾರಣ, ಪೊಲೀಸರ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಹೇಳಿದ್ದಾರೆ.
ತಮ್ಮ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯವು ತನಿಖೆ ನಡೆಸಲು ಕೊಡಿಗೆಹಳ್ಳಿ ಪೊಲೀಸರಿಗೆ ಆದೇಶ  ನೀಡಿರುವ ಹಿನ್ನೆಲೆಯಲ್ಲಿ ವಿಡಿಯೋ ಮೂಲಕ ಸ್ಪಷ್ಟನೆ ನೀಡಿರುವ ಅವರು, ತನಿಖೆಗೆ ಎಲ್ಲಾ ರೀತಿಯಲ್ಲೂ ಸಹಕಾರ ಕೊಡುವುದಾಗಿ ತಿಳಿಸಿದ್ದಾರೆ.
ದೇಶದ ಕಾನೂನಿಗಿಂತ ಯಾರೂ ಕೂಡ ದೊಡ್ಡವರಿಲ್ಲ.ಈ ನೆಲದ ಜವಾಬ್ದಾರಿಯುತ ಪ್ರಜೆಯಾಗಿರುವ ನಾನು ನ್ಯಾಯಾಲಯ ನೀಡಿರುವ ಆದೇಶಕ್ಕೆ ಬದ್ದನಾಗಿದ್ದೇನೆ ಎಂದಿದ್ದಾರೆ.
ಹಿಂದೂ ಧರ್ಮ ಮತ್ತು ಆಚಾರ, ವಿಚಾರ ಸಂಪ್ರದಾಯ ಹಾಗೂ ದೇವತೆಗಳ ಬಗ್ಗೆ ಅಪಾರವಾದ ಗೌರವವನ್ನು ಇಟ್ಟುಕೊಂಡಿದ್ದೇನೆ. ಯಾವುದೇ ಸಂದರ್ಭದಲ್ಲೂ ಹಿಂದೂ ಧರ್ಮಕ್ಕಾಗಲಿ, ದೇವತೆಗಳ ಬಗ್ಗೆ ಅಪಮಾನ ಮಾಡುವ ಕೆಲಸ ಮಾಡಿಲ್ಲ. ಇದು ಅಚಾತುರ್ಯದಿಂದ ಆಗಿರುವ ಪ್ರಮಾದವೇ ಹೊರತು ಉದ್ದೇಶಪೂರ್ವಕವಾಗಿ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ವಾಟ್ಸ್ಯಾಪ್ ಗ್ರೂಪ್‍ಗೆ ಕಣ್ತಪ್ಪಿನಿಂದ ಯಾರೋ ಕಳುಹಿಸಿದ ಸಂದೇಶವನ್ನು ಮರು ಫಾರ್ವರ್ಡ್ ಮಾಡಿದ್ದಾರೆ. ಈ ಅಚಾತುರ್ಯ ತಮ್ಮ ಗಮನಕ್ಕೆ ಬಂದ ತಕ್ಷಣ ಸಂದೇಶವನ್ನು ಡಿಲೀಟ್ ಮಾಡಲಾಗಿತ್ತು. ತಕ್ಷಣ ನಾನು ರಾಜ್ಯದ ಜನತೆಯ ಕ್ಷಮೆ ಕೇಳಿದ್ದೇನೆ ಎಂದು ಸಚಿವ ನಿರಾಣಿ ಅವರು ಹೇಳಿದ್ದಾರೆ.
ಅಚಾತುರ್ಯದಿಂದ ಬಂದಿದ್ದ ಮೆಸೇಜ್ ಫಾರ್ವರ್ಡ್ ಆಗಿದೆ. ನಾನು ಸರ್ವಧರ್ಮ ಸಹಿಷ್ಣುತೆಯನ್ನು ಗೌರವಿಸುತ್ತೇನೆ. ಯಾವುದೇ ಧರ್ಮದ ಬಗ್ಗೆ ಎಂದೂ ಹಗುರವಾಗಿ ಮಾತನಾಡಿಲ್ಲ ಎಂದು ಪುನರುಚ್ಚರಿಸಿದ್ದಾರೆ.
ನಮ್ಮ ಕುಟುಂಬವು ತಲಾತಲಾಂತರದಿಂದಲೂ ಆಚಾರವಿಚಾರ, ಸಂಪ್ರದಾಯವನ್ನು ನಂಬಿಕೊಂಡು ಬಂದಿದೆ. ನಾವು ಎಂದಿಗೂ ಯಾವುದೇ ಧರ್ಮವನ್ನಾಗಲಿ, ಅಲ್ಲಿನ ನಂಬಿಕೆಗಳ ಬಗ್ಗೆ ಅಪಮಾನಿಸುವಂತಹ ಕೆಲಸವನ್ನು ಮಾಡಿಲ್ಲ. ನಾನು ಈಗಾಗಲೇ ಇದರ ಬಗ್ಗೆ ಸ್ಪಷ್ಟನೆ ನೀಡಿರುವುದಾಗಿ ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments