Webdunia - Bharat's app for daily news and videos

Install App

ಮೋದಿ ಮುಖ ನೋಡಿ ಬಿಜೆಪಿಗೆ ಬೆಂಬಲ ಕೊಟ್ಟಿದ್ದೆ: ಸುಮಲತಾ ಅಂಬರೀಶ್

Krishnaveni K
ಮಂಗಳವಾರ, 30 ಜನವರಿ 2024 (10:40 IST)
ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣೆ ಟಿಕೆಟ್ ಹಂಚಿಕೆ ವಿಚಾರ ಬಿಜೆಪಿ ಆಕಾಂಕ್ಷಿ ಸುಮಲತಾ ಅಂಬರೀಶ್ ಮತ್ತು ಜೆಡಿಎಸ್ ನಡುವೆ ಕಗ್ಗಂಟಾಗುತ್ತಿದೆ.

ಸ್ಪರ್ಧಿಸಿದರೆ ಮಂಡ್ಯದಿಂದ ಮಾತ್ರ ಎಂದು ಹಾಲಿ ಸಂಸದೆ ಸುಮಲತಾ ಅಂಬರೀಶ್ ಎಂದು ಖಡಾ ಖಂಡಿತವಾಗಿ ಹೇಳುತ್ತಿದ್ದಾರೆ. ಅತ್ತ ಜೆಡಿಎಸ್ ನಾಯಕ ಕುಮಾರಸ್ವಾಮಿ ಮಂಡ್ಯ ಟಿಕೆಟ್ ಗಾಗಿ ಪಟ್ಟು ಹಿಡಿದಿದ್ದಾರೆ. ಹೀಗಾಗಿ ಎರಡೂ ಪಕ್ಷಗಳಿಗೆ ಈಗ ಮಂಡ್ಯ ಟಿಕೆಟ್ ಕಗ್ಗಂಟಾಗಿದೆ.

ಕಳೆದ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಪಕ್ಷೇತರರಾಗಿ ಸ್ಪರ್ಧಿಸಿ ಜೆಡಿಎಸ್ ನ ನಿಖಿಲ್ ಕುಮಾರಸ್ವಾಮಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದರು. ಬಳಿಕ ಪ್ರಧಾನಿ ಮೋದಿ ಮೇಲಿನ ಅಭಿಮಾನದಿಂದ ಸುಮಲತಾ ಬಿಜೆಪಿ ಸೇರಿಕೊಂಡಿದ್ದರು. ಆದರೆ ಈಗ ರಾಜ್ಯದಲ್ಲಿ ಮುಂದಿನ ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆಗೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ. ಇದರಿಂದಾಗಿ ಎರಡೂ ಪಕ್ಷಗಳು ಸಮನ್ವಯದಿಂದ ಸೀಟು ಹಂಚಿಕೆ ಮಾಡಿಕೊಳ್ಳುತ್ತಿದೆ.

ಆದರೆ ಜೆಡಿಎಸ್ ಗೆ ಮೊದಲಿನಿಂದಲೂ ಮಂಡ್ಯ ಕ್ಷೇತ್ರದ ಮೇಲೆ ಕಣ್ಣಿದೆ. ಇದೀಗ ಬಿಜೆಪಿ ಜೊತೆ ಸಖ್ಯ ಮಾಡಿಕೊಂಡಿರುವುದರಿಂದ ಮಂಡ್ಯ ಟಿಕೆಟ್ ಸುಲಭವಾಗಿ ಸಿಗಬಹುದು ಎಂದು ಲೆಕ್ಕಾಚಾರ ಹಾಕಿದೆ. ಆದರೆ ಸುಮಲತಾ ಮಂಡ್ಯ ಟಿಕೆಟ್ ಗೆ ಪಟ್ಟು ಹಿಡಿದಿದ್ದಾರೆ.

ನಾನು ಪ್ರಧಾನಿ ಮೋದಿಯವರ ಕೆಲಸಗಳನ್ನು ನೋಡಿ ಬಿಜೆಪಿಗೆ ಬೆಂಬಲ ಕೊಟ್ಟೆ. ಈಗಲೂ ಬಿಜೆಪಿ ಜೊತೆಗೇ ಇದ್ದೇನೆ. ಒಂದು ವೇಳೆ ಮುಂದಿನ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದಲೇ ಸ್ಪರ್ಧಿಸಿದರೂ ಮಂಡ್ಯದಿಂದ ಮಾತ್ರ ಸ್ಪರ್ದಿಸುತ್ತೇನೆ. ಬೇರೆ ಕ್ಷೇತ್ರದಿಂದ ಸ್ಪರ್ಧಿಸುವುದಾದರೆ ನನಗೆ ರಾಜಕೀಯವೇ ಬೇಡ ಎಂದಿದ್ದಾರೆ ಸುಮಲತಾ. ಹೀಗಾಗಿ ಅವರು ಮುಂದಿನ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಸಿಗದೇ ಇದ್ದರೆ ಪಕ್ಷೇತರರಾಗಿ ಸ್ಪರ್ಧಿಸಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ: ಫ್ರಿಡ್ಜ್‌ನಲ್ಲಿಟ್ಟ ಮಾಂಸ ಸೇವಿಸಿ 7 ಮಂದಿ ಅಸ್ವಸ್ಥ, ಓರ್ವ ಸಾವು

ಬನ್ನೇರುಘಟ್ಟ ಜೈವಿಕ ಉದ್ಯಾನವನದಿಂದ ಜಪಾನ್‌ಗೆ ವಿಮಾನದಲ್ಲಿ ಹಾರಲಿವೆ ನಾಲ್ಕು ಆನೆ

ಆರ್‌ಸಿಬಿ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡ ದಿವ್ಯಾಂಶಿ ತಾಯಿ ದಿಢೀರ್‌ ಠಾಣೆ ಮೆಟ್ಟಿಲೇರಿದ್ದೇಕೆ

ಸ್ಮಾರ್ಟ್ ಮೀಟರ್ ಹಗರಣದಲ್ಲಿರುವ ಸಚಿವ ಕೆಜೆ ಜಾರ್ಜ್ ವಜಾ ಮಾಡಿ: ಡಾ ಸಿಎನ್ ಅಶ್ವತ್ಥನಾರಾಯಣ

ಯೆಸ್ ಬ್ಯಾಂಕ್‌ಗೆ ₹3,000 ಕೋಟಿ ಸಾಲ ವಂಚನೆ: ಅನಿಲ್‌ ಅಂಬಾನಿಗೆ ಜಾರಿ ನಿರ್ದೇಶನಾಲಯ ಶಾಕ್‌

ಮುಂದಿನ ಸುದ್ದಿ
Show comments