Webdunia - Bharat's app for daily news and videos

Install App

ಡಾ. ಜಿ ಪರಮೇಶ್ವರ್ ಅವರ ಅಣ್ಣನ ಮಗನನ್ನು ವಿಚಾರಣೆಗೆ ಒಳಪಡಿಸಲಿರುವ ಐಟಿ

Webdunia
ಶುಕ್ರವಾರ, 11 ಅಕ್ಟೋಬರ್ 2019 (12:07 IST)
ಬೆಂಗಳೂರು : ಮಾಜಿ ಡಿಸಿಎಂ ಡಾ. ಜಿ ಪರಮೇಶ್ವರ್ ಅವರ  ನಿವಾಸ ಹಾಗೂ ಶಿಕ್ಷಣ ಸಂಸ್ಥೆಗಳ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೂಡ ಐಟಿ ದಾಳಿ ಮುಂದುವರಿದಿದ್ದು, ಇಂದು ಪರಮೇಶ್ವರ್ ಅವರ  ಸಹೋದರನ ಮಗ  ಆನಂದ್‌ ಅವರನ್ನು ಐಟಿ ಅಧಿಕಾರಿಗಳು ಪ್ರಶ್ನೆ ಮಾಡಲಿದ್ದಾರೆ ಎನ್ನಲಾಗಿದೆ.




ಹೌದು. ಜಿ ಪರಮೇಶ್ವರ್ ಅವರ ನಿವಾಸ ಮೇಲಿನ ದಾಳಿಯ ವೇಳೆ ಡಾ.ಜಿ ಪರಮೇಶ್ವರ್‌ ಅವರಿಗೆ ಅವರ ಅಣ್ಣನ ಮಗ ಆನಂದ್‌ ಅವರು ಬರೆದಿದ್ದಾರೆ ಎನ್ನಲಾಗಿರುವ ಡೈರಿಯೊಂದು ಐಟಿ ಅಧಿಕಾರಿಗಳಿಗೆ ಸಿಕ್ಕಿದ್ದು, ಇದರಲ್ಲಿ ವಿದ್ಯಾರ್ಥಿಗಳಿಗೆ ಸೀಟು ಹಂಚಿಕೆಯ ಬಗ್ಗೆ ಹಾಗೂ ಯಾರಿಂದ ಎಷ್ಷು ಹಣ ಬಂದಿದೆ. ಎಷ್ಟು ಹಣ ಬರಬೇಕಾಗಿದೆ ಅನ್ನೊಂದನ್ನು ಆನಂದ್ ಬರೆದುಕೊಂಡಿದ್ದಾರೆ.


ಹಾಗೇ  ಆನಂದ ನೀಟ್ ಕಣ್ಣು ತಪ್ಪಿಸಿ ಅಕ್ರಮವಾಗಿ ಮೆಡಿಕಲ್ ಸೀಟ್ ಹಂಚಿಕೆ ಮಾಡ್ತಿದ್ದ ಆರೋಪ ಇತ್ತು. ಅಲ್ಲದೇ ಆನಂದ್ 56 ಸಿನಿಮಾದಲ್ಲೂ ಹೀರೋ ಆಗಿ ನಟಿಸಿದ್ದು, ಹಣವನ್ನು ಸಿನಿಮಾಕ್ಕೆ ಹೂಡಿಕೆ ಮಾಡಿರುವ ಅನುಮಾನದ ಹಿನ್ನಲೆಯಲ್ಲಿ ಇಂದು ಅವರನ್ನು  ಐಟಿ ಅಧಿಕಾರಿಗಳು ವಿಚಾರಣೆ ಮಾಡಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments