ನಾನು ಮಂಡ್ಯದಲ್ಲಿ ಹಣ್ಣು ವ್ಯಾಪಾರ ಮಾಡುತ್ತಿದ್ದೆ; ಬಿಎಸ್ ಯಡಿಯೂರಪ್ಪ!

Webdunia
ಶುಕ್ರವಾರ, 22 ಅಕ್ಟೋಬರ್ 2021 (17:06 IST)
ಹಾವೇರಿ : ಹಾನಗಲ್ ತಾಲೂಕಿನ ಬೆಳಗಾಲಪೆಟೆ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ಪರ ನಡೆದ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಕಾಂಗ್ರೆಸ್ ಗೆ ಡಿಪಾಸಿಟ್ ಹೋಗಬೇಕು.

ಆ ಕೆಲಸವನ್ನು ನೀವು ಮಾಡಿ. ಬಹುತೇಕ ವರ್ಷ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಒಂದು ಕಾಲದಲ್ಲಿ ದೆಹಲಿಗೆ ಹೋಗಿ ಟಿಕೆಟ್ ತಂದ್ರೆ ಗೆಲ್ಲೋದು ನೂರಕ್ಕೆ ನೂರು ನಿಶ್ಚಿತ ಅನ್ನೋ ಕಾಲವಿತ್ತು. ಅವರ ದುರಾಡಳಿತದಿಂದ ಬೇಸತ್ತು ಈಗ ಕೇವಲ 44 ಸಂಸದರಿದ್ದಾರೆ ಎಂದು ಟೀಕಿಸಿದರು.
ದೇಶದ ಅನೇಕ ರಾಜ್ಯಗಳಲ್ಲಿ ಬಿಜೆಪಿ ಸರಕಾರವಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿಯನ್ನು ಈಡಿ ಪ್ರಪಂಚ ಅಚ್ಚರಿಯಿಂದ ನೋಡ್ತಿದೆ. ನಮ್ಮ ಕಾಂಗ್ರೆಸ್ ನ ಸ್ನೇಹಿತರು ಹಣ, ಹೆಂಡ, ಅಧಿಕಾರದ ಬಲದಿಂದ ಚುನಾವಣೆ ಗೆಲ್ತಿದ್ರು. ಪ್ರಧಾನಿ ಮೋದಿ ಅವರ ಆಡಳಿತದ ಪರಿಣಾಮ ಈಗ ಎಲ್ಲಿದೆ ಕಾಂಗ್ರೆಸ್, ಎಲ್ಲಿದ್ದಾರೆ ನಿಮ್ಮ ನಾಯಕರು ಎಂಬಂತಾಗಿದೆ. ಎಲ್ಲೋ ಸ್ವಲ್ಪ ಕರ್ನಾಟಕದಲ್ಲಿ ಉಸಿರಾಡ್ತಿದೆ. ಅದಕ್ಕೆ ಧಿಮಾಕಿನಿಂದ ಮಾತಾಡ್ತಿದ್ದಾರೆ. ಒಂದು ಕಾಲದಲ್ಲಿ ಜನರು ಕಣ್ಣು ಮುಚ್ಕೊಂಡು ವೋಟು ಹಾಕುತ್ತಿದ್ದರು. ಎಲ್ಲರಿಗೂ ಒಂದೇ ವೋಟು ಅನ್ನೋದು ಅಂಬೇಡ್ಕರ್ ಕೊಟ್ಟರು. ಇಲ್ಲಿರೋ ಬಹುತೇಕರು ಬಿಜೆಪಿಯ ಹಿತೈಷಿಗಳು, ಕಾರ್ಯಕರ್ತರೆ ಬಂದಿದ್ದೀರಿ. ಒಂದು ವಾರ ಪ್ರಧಾನಿ ಮೋದಿ ಅವರ ಕಾಣಿಕೆ, ಬೊಮ್ಮಾಯಿ ಸರಕಾರದ ಕಾಣಿಕೆ ಏನು, ಯಡಿಯೂರಪ್ಪ ಕೊಟ್ಟ ಕಾಣಿಕೆ ಏನು ಅನ್ನೋದನ್ನ ಜನರಿಗೆ ತಿಳಿಸಬೇಕು ಎಂದು ಕಾರ್ಯಕರ್ತರಿಗೆ ಯಡಿಯೂರಪ್ಪ ಅವರು ಕರೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿಗಾಗಿ ಬಿಸಿಲಲ್ಲಿ ನಿಂತು ಕಾಯುತ್ತಿದ್ದ ವಿದ್ಯಾರ್ಥಿಗಳು: ನಿರಾಸೆ ಮಾಡದ ಪ್ರಧಾನಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪ್ರಧಾನಿ ಮೋದಿ ಉಡುಪಿ ರೋಡ್ ಶೋ ಆರಂಭ live video

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಹೈಕಮಾಂಡ್ ಮೀಟಿಂಗ್ ಬಗ್ಗೆ ಪ್ರಿಯಾಂಕ್ ಖರ್ಗೆ ಸ್ಪೋಟಕ ಹೇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments