Webdunia - Bharat's app for daily news and videos

Install App

ಜೈಪುರಕ್ಕೆ ಹೋಗಿ ಕೈ ಮುರಿದುಕೊಂಡಿದ್ದೆ : ಬಸವರಾಜ ಹೊರಟ್ಟಿ

Webdunia
ಮಂಗಳವಾರ, 24 ಜನವರಿ 2023 (10:23 IST)
ಧಾರವಾಡ : ನಾನು ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಟ ಆಡಿದ್ದೇನೆ. ಎರಡು ಬಾರಿ ಯೂನಿವರ್ಸಿಟಿ ಬ್ಲೂ ಆಗಿದ್ದೆ. ಅದರಲ್ಲಿ ಒಂದು ಬಾರಿ ಕಬಡ್ಡಿ ಆಟದಲ್ಲಿ ನಾನು ಜೈಪುರಕ್ಕೆ ಹೋಗಿದ್ದಾಗ ಕೈಮುರಿದುಕೊಂಡು ಬಂದಿದ್ದೆ ಎಂದು ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಧಾರವಾಡ ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕಬಡ್ಡಿ ಆಟಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ನಾನು ರಾಷ್ಟ್ರಮಟ್ಟದಲ್ಲಿ ಕಬಡ್ಡಿ ಆಡಿದ್ದೇನೆ. 25 ವರ್ಷದ ನಂತರ ಇವತ್ತು ಆಡಿದ್ದು ಬಹಳ ಖುಷಿಯಾಗಿದೆ ಎಂದರು.

ಪ್ರತಿವರ್ಷ ಶಾಸಕರ ದಿನಾಚರಣೆಯಲ್ಲಿ ನಾವು ಕಬಡ್ಡಿ ಅಡುತ್ತಿದ್ದೆವು. ಆದರೆ ಈಗ ಅದು ಬಂದ್ ಆಗಿದೆ. ಕಬಡ್ಡಿಯಲ್ಲಿ ಸಂಪೂರ್ಣವಾದ ವ್ಯಾಯಾಮ ಸಿಗುತ್ತದೆ.

ಎಷ್ಟೋ ವರ್ಷದ ನೆನಪು ಇಂದು ಆಗಿದೆ. ನಾನು ಜೈಪುರಕ್ಕೆ ಹೋಗಿ ಕಬಡ್ಡಿ ಆಡಿ ಕೈ ಮುರಿದುಕೊಂಡು ಬಂದಿದ್ದೆ ಎಂದು ಹಳೆಯ ನೆನಪನ್ನು ಹಂಚಿಕೊಂಡರು. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments