Webdunia - Bharat's app for daily news and videos

Install App

ರಾಜಕೀಯದಲ್ಲಿ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

Webdunia
ಬುಧವಾರ, 11 ಆಗಸ್ಟ್ 2021 (16:16 IST)
ರಾಜಕೀಯ ನಿವೃತ್ತಿಗೆ ವಯಸ್ಸು ಮುಖ್ಯವಲ್ಲ. ಉತ್ಸಾಹ, ಆರೋಗ್ಯ ಚೆನ್ನಾಗಿದ್ದರೆ ಮುಂದುವರಿಯಬಹುದು. ನನಗೀಗ 75 ವರ್ಷ. ನನ್ನ ಉತ್ಸಾಹ ಕುಗ್ಗಿಲ್ಲ ಆದ್ದರಿಂದ ರಾಜಕೀಯದಲ್ಲಿ ಮುಂದುವರಿದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಈಗಲೂ ಕೆಲಸ ಮಾಡುವ ಉತ್ಸಾಹ ಇದೆ. ಆದ್ದರಿಂದ ಮುಂದುವರಿಯುತ್ತಿದ್ದೇನೆ. ಮುಂದುವರಿಯತ್ತೇನೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಪರೋಕ್ಷವಾಗಿ ಮುಂದಿನ ಚುನಾವಣಾ ಅಭ್ಯರ್ಥಿ ರೇಸ್ ನಲ್ಲಿ ಇರುವುದನ್ನು ಒಪ್ಪಿಕೊಂಡರು.
ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಿದ್ದರಾಮಯ್ಯ, ಬಿಜೆಪಿ ಯಾವತ್ತು ಹಿಂದೂಳಿದ ವರ್ಗಗಳ ಪರವಾಗಿ ಇಲ್ಲ. ಎಲ್ಲ ಹಂತದಲ್ಲೂ ಮೀಸಲು ವಿರೋ
ಧ ಮಾಡಿದವರು. ಮೀಸಲಾತಿ ಪರವಾಗಿದ್ದಾರೆ ಸಂವಿಧಾನ ಬದಲಾಗಬೇಕು ಅಂತಿರಲಿಲ್ಲ ಎಂದರು.
ಸರ್ಕಾರ ಜಾತಿ ಗಣತಿ ಮಾಡಿಸಬೇಕು. ಆ ವೇಳೆ ಯಾರು ಸಮಾಜದಲ್ಲಿ ಬಡತನದಲ್ಲಿದ್ದಾರೆಂದು ಗೊತ್ತಾಗಲಿದೆ. ಆ ವೇಳೆ ವಿಶೇಷವಾಗಿ ಆ ಜನರಿಗೆ ಮೀಸಲಾತಿ ನೀಡಲು ಅನುಕೂಲ ಆಗುತ್ತೆ.  ಇದು ಒಂದು ದಾಖಲೆ‌ಯಾಗಿ ಉಳಿಯುತ್ತೆ ಎಂದು ಅವರು ಅಭಿಪ್ರಾಯಪಟ್ಟರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments