Select Your Language

Notifications

webdunia
webdunia
webdunia
webdunia

ಮೋದಿ ಕಾಲು ಹಿಡಿದಾದ್ರೂ 1 ಲಕ್ಷ ಕೋಟಿ ಹಣ ತರ್ತೇನೆ: ಬಿಎಸ್‌ವೈ

ಮೋದಿ ಕಾಲು ಹಿಡಿದಾದ್ರೂ 1 ಲಕ್ಷ ಕೋಟಿ ಹಣ ತರ್ತೇನೆ: ಬಿಎಸ್‌ವೈ
ಕೊಪ್ಪಳ , ಶನಿವಾರ, 16 ಡಿಸೆಂಬರ್ 2017 (19:29 IST)
ರಾಜ್ಯದಲ್ಲಿ ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಮೋದಿ ಕಾಲು ಹಿಡಿದಾದ್ರೂ ಮಹಾದಾಯಿ ಯೋಜನೆಗೆ 1 ಲಕ್ಷ ಕೋಟಿ ಹಣ ತರ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಕೊಪ್ಪಳದಲ್ಲಿ ಆಯೋಜಿಸಲಾದ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಹದಾಯಿ ಕಾಂಗ್ರೆಸ್ ಸರಕಾರದ ಪಾಪದ ಕೂಸು. ಕಳೆದ ನಾಲ್ಕುವರೆ ವರ್ಷಗಳಿಂದ ಏನ್ ಕತ್ತೆ ಕಾಯ್ತಿದ್ದೀಯಾ ಎಂದು ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಏಕವಚನದಲ್ಲಿಯೇ ವಾಗ್ದಾಳಿ ನಡೆಸಿದರು.
 
ಸಿಎಂ ಸಿದ್ದರಾಮಯ್ಯ ಮತ್ತು ನೀರಾವರಿ ಖಾತೆ ಸಚಿವ ಎಂ.ಬಿ.ಪಾಟೀಲ್ ಇಬ್ಬರು ತಲೆತಿರುಕರು. ಇಬ್ಬರು ಸಮಸ್ಯೆ ಇತ್ಯರ್ಥಕ್ಕೆ ಪ್ರಯತ್ನಿಸಿಲ್ಲ. ಕೇವಲ ರಾಜಕೀಯ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿದ್ದಾರೆ ಎಂದು ಗುಡುಗಿದರು.
 
ನಾನು ಮಹದಾಯಿ ಯೋಜನೆ ಜಾರಿಗೆ ತಂದೇ ತರುತ್ತೇನೆ. ನಾನು ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇನೆ. ಇಲ್ಲವಾದಲ್ಲಿ ನಿಮಗೆ ಮುಖ ತೋರಿಸುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಬಿಎಸ್‌ವೈ ಪುಂಗಿ ಊದುವ ಹಾವಾಡಿಗ, ಅನಂತ್‌ಕುಮಾರ್ ವಿದೂಷಕ: ಸಿಎಂ