Webdunia - Bharat's app for daily news and videos

Install App

ಬಿಜೆಪಿಗೆ ಕಾಂಗ್ರೆಸ್ ಶಾಸಕರನು ಕರೆತರುವೆ

Webdunia
ಮಂಗಳವಾರ, 25 ಜನವರಿ 2022 (16:11 IST)
ವಿಧಾನ ಸಭೆ ಒಳಗೆ ಏನು ಹೇಳಿದ್ರು ಒಮ್ಮೆ ಸಿದ್ದರಾಮಯ್ಯ ಜ್ಞಾಪಿಸಿಕೊಳ್ಳಲಿ. ಟೇಬಲ್ ಕುಟ್ಟಿ ಹೇಳಿದ್ರು. ಯಾವುದೇ ಕಾರಣಕ್ಕೂ ಈ ದ್ರೋಹಿಗಳನ್ನ ಸೇರ್ಪಡೆ ಮಾಡಿಕೊಳ್ಳಲ್ಲ ಎಂದಿದ್ರು. ಈಗ ಯಾಕೆ ಬೇಕು ಇವರಿಗೆ.ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗೋಕೆ ಮತ್ತೆ ಕರೆಯುತ್ತಿದ್ದಾರಾ. ಯಾವುದೇ ಕಾರಣಕ್ಕೂ ಇದು ಸಾಧ್ಯವಿಲ್ಲ. ಮತ್ತೆ ಬೊಮ್ಮಯಿ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಬರುತ್ತೆ ಎಂದು ಸಿದ್ದರಾಮಯ್ಯಗೆ ರಮೇಶ್ ಜಾರಕಿಹೊಳಿ ಸವಾಲು ಹಾಕಿದ್ದಾರೆ. ನನ್ನ ಜತೆ 36 ಜನ ಇದ್ರು, 17 ಜನ ನನ್ನ ಜತೆ ಬಂದ್ರು ಇನ್ನು ಇದೇ ವೇಳೆ ರಮೇಶ್ ಜಾರಕಿಹೊಳಿ, ನನ್ನ ಜತೆ 36 ಜನ ಇದ್ರು,
 
17 ಜನ ನನ್ನ ಜತೆ ಬಂದ್ರು ತಾಂತ್ರಿಕ ಕಾರಣದಿಂದ ಅಲ್ಲಿಯೇ ಇದ್ದಾರೆ. ಆ ಸಂದರ್ಭದಲ್ಲಿ ನಮ್ಮ ಜತೆ ಬರಲಿಲ್ಲ. ಕಾಂಗ್ರೆಸ್ ನ 16 ಶಾಸಕರು ನನ್ನ ಸಂಪರ್ಕದಲ್ಲಿರುವುದು ನಿಜ. ಬಿಜೆಪಿ ಹೈಕಮಾಂಡ್ ಒಪ್ಪಿದರೆ ಅವರನ್ನು ಪಕ್ಷಕ್ಕೆ ಕರೆತರುವೆ. ಜೆಡಿಎಸ್ನ ಮೂವರು ಶಾಸಕರು ಕೂಡ ಸಂಪರ್ಕದಲ್ಲಿದ್ದಾರೆ. ಕುಮಾರಸ್ವಾಮಿ ಒಳ್ಳೆಯವರು, ಜೆಡಿಎಸ್ನವರನ್ನು ಸೆಳೆಯಲ್ಲ. ಬೆಳಗಾವಿ ಜಿಲ್ಲೆಯ ಮೂವರು ಶಾಸಕರು ಸಂಪರ್ಕದಲ್ಲಿದ್ದಾರೆ. ಮೂವರ ಪೈಕಿ ಇಬ್ಬರು ಬಿಜೆಪಿಗೆ ಬಂದರೆ ಅಭ್ಯಂತರವಿಲ್ಲ. ಅವನೊಬ್ಬ ಬಿಜೆಪಿಗೆ ಬಂದರೆ ನಾನೇ ಬೇರೆ ಕಡೆ ಹೋಗುತ್ತೇನೆ ಎಂದು ಬೆಂಗಳೂರಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments