Webdunia - Bharat's app for daily news and videos

Install App

ಮೂಗು ಹಿಡಿದು ಬಾಯಿ ತೆರೆಸಿ ಸಾಲ ಮನ್ನಾ ಮಾಡಿಸುತ್ತೇನೆ: ಬಿಎಸ್‌ವೈ

Webdunia
ಶನಿವಾರ, 3 ಅಕ್ಟೋಬರ್ 2015 (17:22 IST)
ಬಿಜೆಪಿ ರಾಜ್ಯ ಘಟಕದ ವತಿಯಿಂದ ಇಂದು ಹಮ್ಮಿಕೊಂಡಿರುವ ಎರಡನೇ ಹಂತದ ರೈತ ಚೈತನ್ಯ ಯಾತ್ರೆಯಲ್ಲಿ ಮಾಜಿ ಮುಖ್ಯಮಂತ್ರಿ, ಸಂಸದ ಯಡಿಯೂರಪ್ಪ ಅವರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಿದ್ದರಾಮಯ್ಯನವರೇ ನಾನು ನಿಮ್ಮ ಮೂಗು ಹಿಡಿದು ಬಾಯಿ ತೆರೆಸಿ ರೈತರ ಸಾಲ ಮನ್ನಾ ಮಾಡಿಸುತ್ತೇನೆ ಎಂದು ಶಪಥ ಮಾಡಿದ್ದಾರೆ. 
 
ಜಿಲ್ಲೆಯ ನಂಜನಗೂಡು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರಿರುವ ಕಾಂಗ್ರೆಸ್ ಸರ್ಕಾರ ಮೋಜಿನ ಆಡಳಿತ ನಡೆಸುತ್ತಿದೆ. ಆದರೆ ಅವರು ಅದಕ್ಕೆ ತಕ್ಕ ಪ್ರಾಯಾಶ್ಚಿತವನ್ನೂ ಕೂಡ ಅನುಭವಿಸಲಿದ್ದಾರೆ. ರಾಜ್ಯದೆಲ್ಲೆಡೆ ಸಂಚರಿಸಿ ರೈತರನ್ನು ಹುರಿದುಂಬಿಸುವ ಮೂಲಕ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಿದ್ದೇನೆ ಎಂದರು. 
 
ಇದೇ ವೇಳೆ, ಸಿದ್ದರಾಮಯ್ಯ ಅವರೇ ನೀವು ನಿಮ್ಮ ಕುರ್ಚಿಯಿಂದ ಯಾವಾಗ ಇಳಿಯುತ್ತೀರೋ ಗೊತ್ತಿಲ್ಲ. ಆದರೆ ನಾನು ನಿಮ್ಮ ಮೂಗು ಹಿಡಿದು ಬಾಯಿ ತೆರೆಸಿ ರೈತರ ಸಾಲ ಮನ್ನಾ ಮಾಡಿಸುತ್ತೇನೆ ಎಂದು ಶಪಥ ಮಾಡಿದ ಅವರು, ರಾಜ್ಯದ ಜನತೆಯಿಂದ ಸಂಗ್ರಹಿಸುತ್ತಿರುವ ತೆರಿಗೆ ಹಣ ಅವರ ಕಲ್ಯಾಣಕ್ಕಾಗಿಯೇ ಬಳಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments