Webdunia - Bharat's app for daily news and videos

Install App

ಜೀವಂತ ಆಗಿದ್ದರೆ ಈ ಅವಧಿಯಲ್ಲೇ ಸಿಎಂ ಆಗ್ತೇನೆ: ಉಮೇಶ್ ಕತ್ತಿ

Webdunia
ಭಾನುವಾರ, 15 ಆಗಸ್ಟ್ 2021 (21:40 IST)

ನಮ್ಮ ಆಸೆ ಈಡೇರಿದರೆ ಬರುವ ಕೆಲವೇ ದಿನಗಳಲ್ಲಿ ನಾನು ಮುಖ್ಯಮಂತ್ರಿ ಆಗಬಹುದು. ಜೀವಂತ ಇದ್ದರೇ ಇದೇ ಅವಧಿ, ಸತ್ತ

ರೇ ಮುಂದಿನ ಅವಧಿಯಲ್ಲಿ ಎಂದು ಸಚಿವ ಉಮೇಶ್ ಕತ್ತಿ ಮುಖ್ಯಮಂತ್ರಿ ಆಗುವ ಆಸೆ ಬಿಚ್ಚಿಟ್ಟಿದ್ದಾರೆ.

ಬಾಗಲಕೋಟೆಯಲ್ಲಿ ಭಾನುವಾರ ಮಾಧ್ಯಮದ ಜೊತೆ ಮಾತನಾಡಿದ ಅವರು, ಆದರೆ ಇದೇ ಅವಧಿಯಲ್ಲಿ ಸಿಎಂ ಆಗ್ತೀನಿ. ಹೋದರೆ (ಸತ್ತರೆ) ನನ್ನ ಕಡೆಯಿಂದ ಏನು ಮಾಡೋಕೆ ಆಗೋಲ್ಲ. ಮತ್ತೇ ಏನು ಹೇಳಬೇಕು ನಿಮಗೆ ಎಂದು ಚಟಾಕಿ ಹಾರಿಸಿದರು.

ದೇಶದಲ್ಲಿ ಪ್ರಧಾನಿ, ರಾಜ್ಯದಲ್ಲಿ ಸಿಎಂ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕೆಲವು ಘೋಷಣೆ, ನೀವು ಜಿಲ್ಲೆಗೆ ಏನಾದರೂ ಘೋಷಣೆ ಮಾಡುತ್ತೀರಾ ಎನ್ನುವ ಪ್ರಶ್ನೆಗೆ, ಪ್ರಧಾನಿ ಅಲ್ಲಿ(ದೆಹಲಿ,) ಮುಖ್ಯಮಂತ್ರಿ ಬೆಂಗಳೂರಿನಲ್ಲಿ ನಾನು ಇಲ್ಲಿದ್ದೀನಿ ಅವರು ಏನು ಹೇಳಿದ್ದಾರೆ ನಾನು ಕೇಳಿಲ್ಲ. ಬರುವ ದಿನಗಳಲ್ಲಿ ಜಿಲ್ಲೆಯ ಅಭಿವೃದ್ಧಿಗೆ ಒತ್ತು ನೀಡುತ್ತೇನೆ ಎಂದು ಅವರು ಹೇಳಿದರು.

ನಮ್ಮ ಇಲಾಖೆಯಲ್ಲಿ ಏನಿದೆ.ಆನೆ, ಹುಲಿಗಳಿವೆ ಎಂದರು. ಜಿಲ್ಲೆಯ ರಾಜಕಾರಣ, ಅಭಿವೃದ್ಧಿ ದೃಷ್ಟಿಯಿಂದ ಆಯಾ ಜಿಲ್ಲೆಯ ಸಚಿವರೇ ಉಸ್ತುವಾರಿಗಳಾದರೇ ಒಳ್ಳೆಯದು, ಜಿಲ್ಲೆಯಲ್ಲಿ ಗೊಂದಲಗಳಿಂದ ಪಕ್ಷ ಬೇರೆಯವರಿಗೆ ಜಿಲ್ಲಾ ಉಸ್ತುವಾರಿ ಕೊಟ್ಟಿದೆ.ಪಕ್ಷದ ನಿರ್ಣಯಗಳಿಗೆ ನಾನು ತಲೆ ಬಾಗುತ್ತೇನೆ ಎಂದು ತಿಳಿಸಿದರು.
75ನೇ ಸ್ವಾತಂತ್ರೋತ್ಸವ ಅಮೃತ ಮಹೋತ್ಸವ ಆಚರಿಸಲಾಗುತ್ತಿದೆ. ಜಿಲ್ಲೆಯ ಜನತೆಗೆ ಒಳ್ಳೆಯದಾಗಲಿ ಎಂದರು. ಕೃಷ್ಣಾ ಮೇಲ್ದಂಡೆ ಯೋಜನೆ ನೀರನ್ನು ಸಮರ್ಪಕವಾಗಿ ಬಳಸಿಕೊಂಡು ವಿಜಯಪುರ ಬಾಗಲಕೋಟೆ ಅವಳಿ ಜಿಲ್ಲೆ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ನನ್ನ ಅದೃಷ್ಟವೋ ವಿಜಯಪುರ ಬಾಗಲಕೋಟೆ ಜಿಲ್ಲೆಯ ಸುದೈವವೋ ಗೊತ್ತಿಲ್ಲ. ನಾನು ಮೊದಲ ಬಾರಿ ಮಂತ್ರಿಯಾಗಿ ಅಖಂಡ ವಿಜಯಪುರ ಜಿಲ್ಲೆಯಲ್ಲಿ 50ನೇ ಸುವರ್ಣ ಮಹೋತ್ಸವದ ಸ್ವಾತಂತ್ರೋತ್ಸವದ ಧ್ವಜಾರೋಹಣ ಮಾಡಿದ್ದೇ. ಈಗ 75ನೇ ಅಮೃತ ಮಹೋತ್ಸವದ ಸ್ವಾತಂತ್ರೋತ್ಸವದ ಧ್ವಜಾರೋಹಣವನ್ನು ಬಾಗಲಕೋಟೆ ಜಿಲ್ಲೆಯಲ್ಲಿ ಮಾಡಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments