Select Your Language

Notifications

webdunia
webdunia
webdunia
webdunia

ಪ್ರಾಣವನ್ನೇ ಪಣವಾಗಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡುವೆ: ಗೀತಾ ಮಹಾದೇವ್ ಪ್ರಸಾದ್

ಪ್ರಾಣವನ್ನೇ ಪಣವಾಗಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡುವೆ: ಗೀತಾ ಮಹಾದೇವ್ ಪ್ರಸಾದ್
ಗುಂಡ್ಲುಪೇಟೆ , ಗುರುವಾರ, 13 ಏಪ್ರಿಲ್ 2017 (15:48 IST)
ಕಳೆದ 25 ವರ್ಷಗಳಿಂದ ಪತಿ ಮಹಾದೇವ್ ಪ್ರಸಾದ್ ಮಾಡಿದ ಕ್ಷೇತ್ರದ ಅಭಿವೃದ್ಧಿ, ಜನತೆಯ ಅನುಕಂಪ ನನ್ನ ಗೆಲುವಿಗೆ ಕಾರಣವಾಗಿದೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ಹೇಳಿದ್ದಾರೆ. 
  
ಉಪಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಧೃವನಾರಾಯಣ್ ವ್ಯಾಪಕ ಪ್ರಚಾರ ಮಾಡಿರುವುದು ಗೆಲುವಿಗೆ ಮುನ್ನುಡಿ ಬರೆಯಿತು ಎಂದು ತಿಳಿಸಿದ್ದಾರೆ.  
 
ಬಿಜೆಪಿ ಸಂಸದ ಪ್ರತಾಪ್ ಸಿಂಹ ನನ್ನ ಬಗ್ಗೆ ಹೇಳಿಕೆ ನೀಡಿ ಮಹಿಳೆಯರನ್ನು ಅಪಮಾನ ಮಾಡಿರುವುದು ಕೂಡಾ ಮಹಿಳೆಯರು ಕಾಂಗ್ರೆಸ್ ಪಕ್ಷದತ್ತ ವಾಲುವಂತೆ ಮಾಡಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಣವನ್ನೇ ಪಣವಾಗಿಡುತ್ತೇನೆ. ನೀರಿನ ತೊಂದರೆಯನ್ನು ಮುಕ್ತಗೊಳಿಸಲು ಎಲ್ಲಾ ಕೆರೆಗಳಿಗೆ ನೀರು ತುಂಬುವ ಯೋಜನೆ ಹಮ್ಮಿಕೊಳ್ಳುವುದಕ್ಕೆ ಆದ್ಯತೆ ನೀಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯರ ಜನಪರ ಅಡಳಿತವೇ ಗೆಲುವಿಗೆ ಕಾರಣ: ಕಳಲೆ ಕೇಶವಮೂರ್ತಿ