Webdunia - Bharat's app for daily news and videos

Install App

ಪ್ರಾಣವನ್ನೇ ಪಣವಾಗಿಟ್ಟು ಕ್ಷೇತ್ರದ ಅಭಿವೃದ್ಧಿ ಮಾಡುವೆ: ಗೀತಾ ಮಹಾದೇವ್ ಪ್ರಸಾದ್

Webdunia
ಗುರುವಾರ, 13 ಏಪ್ರಿಲ್ 2017 (15:48 IST)
ಕಳೆದ 25 ವರ್ಷಗಳಿಂದ ಪತಿ ಮಹಾದೇವ್ ಪ್ರಸಾದ್ ಮಾಡಿದ ಕ್ಷೇತ್ರದ ಅಭಿವೃದ್ಧಿ, ಜನತೆಯ ಅನುಕಂಪ ನನ್ನ ಗೆಲುವಿಗೆ ಕಾರಣವಾಗಿದೆ ಎಂದು ಗುಂಡ್ಲುಪೇಟೆ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ಹೇಳಿದ್ದಾರೆ. 
  
ಉಪಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವರಾದ ಡಿ.ಕೆ.ಶಿವಕುಮಾರ್, ಯು.ಟಿ.ಖಾದರ್ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಂಸದ ಧೃವನಾರಾಯಣ್ ವ್ಯಾಪಕ ಪ್ರಚಾರ ಮಾಡಿರುವುದು ಗೆಲುವಿಗೆ ಮುನ್ನುಡಿ ಬರೆಯಿತು ಎಂದು ತಿಳಿಸಿದ್ದಾರೆ.  
 
ಬಿಜೆಪಿ ಸಂಸದ ಪ್ರತಾಪ್ ಸಿಂಹ ನನ್ನ ಬಗ್ಗೆ ಹೇಳಿಕೆ ನೀಡಿ ಮಹಿಳೆಯರನ್ನು ಅಪಮಾನ ಮಾಡಿರುವುದು ಕೂಡಾ ಮಹಿಳೆಯರು ಕಾಂಗ್ರೆಸ್ ಪಕ್ಷದತ್ತ ವಾಲುವಂತೆ ಮಾಡಿತು. ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತಹಾಕಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.
 
ಜನತೆ ನನ್ನ ಮೇಲಿಟ್ಟಿರುವ ಪ್ರೀತಿ ವಿಶ್ವಾಸವನ್ನು ಉಳಿಸಿಕೊಂಡು ಕ್ಷೇತ್ರದ ಅಭಿವೃದ್ಧಿಗಾಗಿ ಪ್ರಾಣವನ್ನೇ ಪಣವಾಗಿಡುತ್ತೇನೆ. ನೀರಿನ ತೊಂದರೆಯನ್ನು ಮುಕ್ತಗೊಳಿಸಲು ಎಲ್ಲಾ ಕೆರೆಗಳಿಗೆ ನೀರು ತುಂಬುವ ಯೋಜನೆ ಹಮ್ಮಿಕೊಳ್ಳುವುದಕ್ಕೆ ಆದ್ಯತೆ ನೀಡುವುದಾಗಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಮಹಾದೇವ್ ಪ್ರಸಾದ್ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments