Webdunia - Bharat's app for daily news and videos

Install App

ಸರಕಾರದ ಕೆಲಸಕ್ಕೂ ಸಿದ್ದ, ಪಕ್ಷದ ಕೆಲಸಕ್ಕೂ ಬದ್ಧ : ಸಚಿವ ಅಂಜನೇಯ

Webdunia
ಭಾನುವಾರ, 26 ಫೆಬ್ರವರಿ 2017 (17:02 IST)
ನಾನು ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿದ್ದೇನೆ. ಸಚಿವರನ್ನು ತೆಗೆಯುವುದು ಬಿಡುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಟ್ಟ ವಿಚಾರ ಎಂದು ಸಚಿವ ಎಚ್.ಅಂಜನೇಯ ಹೇಳಿದ್ದಾರೆ.
 
ನಾನು ಸರಕಾರದ ಕೆಲಸಕ್ಕೂ ಸಿದ್ದ ಪಕ್ಷದ ಕೆಲಸಕ್ಕೂ ಬದ್ಧ. ಪಕ್ಷದ ಹೈಕಮಾಂಡ್ ಯಾವ ಕೆಲಸ ಕೊಟ್ಟರು ಸಂತೋಷದಿಂದ ನಿರ್ವಹಿಸುತ್ತೇನೆ ಎಂದು ಕೆಪಿಸಿಸಿ ಸಮನ್ವಯ ಸಮಿತಿಯಲ್ಲಿ ತಿಳಿಸಿದ್ದಾರೆ.
 
ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವುದು ನಮ್ಮೆಲ್ಲರ ಗುರಿಯಾಗಿದೆ. ಕಾಂಗ್ರೆಸ್ ಹೈಕಮಾಂಡ್ ಆಗಲಿ, ಸಿಎಂ ಸಿದ್ದರಾಮಯ್ಯರಾಗಲಿ ಯಾವುದೇ ಹೊಣೆ ಹೊರಿಸಿದರು ನಿಭಾಯಿಸಲು ಸಿದ್ದನಾಗಿದ್ದೇನೆ ಎಂದರು.
 
ಬಿಜೆಪಿಗೆ ಸರಕಾರದ ವಿರುದ್ಧ ಯಾವುದೇ ಗುರುತರ ಆರೋಪಗಳಿಲ್ಲವಾದ್ದರಿಂದ ಡೈರಿಯ ನಾಟಕವಾಡುತ್ತಿದೆ. ಡೈರಿಯ ಸತ್ಯಾಸತ್ಯತೆ ಯಡಿಯೂರಪ್ಪ-ಅನಂತ್ ಕುಮಾರ್ ಸಂಭಾಷಣೆಯಲ್ಲಿಯೇ ಗೊತ್ತಾಗಿದೆ. ಜನತೆ ಮೂರ್ಖರಲ್ಲ. ಬಿಜೆಪಿಯ ಷಡ್ಯಂತ್ರಕ್ಕೆ ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ಸಚಿವ ಎಚ್.ಅಂಜನೇಯ ಗುಡುಗಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments