Webdunia - Bharat's app for daily news and videos

Install App

ವಿಜಯೇಂದ್ರರ ಎಲ್ಲ ಹಗರಣ ಬಿಚ್ಚಿಡುತ್ತೇನೆ: ಗುಡುಗಿದ ಡಿಕೆ ಶಿವಕುಮಾರ್‌

Sampriya
ಶುಕ್ರವಾರ, 2 ಆಗಸ್ಟ್ 2024 (17:37 IST)
Photo Courtesy X
ರಾಮನಗರ: ಬಿಜೆಪಿ ಸರ್ಕಾರದಲ್ಲಿರುವಾಗ ಯಾವ ಬ್ಯಾಂಕ್‌ಗೆ ಎಷ್ಟು ಹಣ ಹೋಗಿದೆ. ಅವರ ಅವಧಿಯಲ್ಲಿ ನಡೆದ ಹಗರಣಕ್ಕೆ ಯಾರು ಜವಾಬ್ದಾರರು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪ್ರಶ್ನಿಸಿದರು.

ಮೈಸೂರು ಪಾದಯಾತ್ರೆ ಕೈಗೊಂಡಿರುವ ಬಿಜೆಪಿ ಮತ್ತು ಜೆಡಿಎಸ್​​ಗೆ ಟಕ್ಕರ್ ಕೊಡಲು ನಡೆಸಿದ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ನಮ್ಮನ್ನು ಜೈಲಿಗೆ ಹಾಕಲು ಬಿಜೆಪಿ ಸಂಚು ಮಾಡುತ್ತಿದೆ.ನಾನು ಜೈಲಿಗೆ ಹೋಗಲು ರೆಡಿ ಇದ್ದೇನೆ. ನನ್ನಂತಹ ಬೇಕಾದಷ್ಟು ಜನ ಕಾಂಗ್ರೆಸ್​​ನಲ್ಲಿ ಹುಟ್ಟಿಕೊಳ್ಳುತ್ತಾರೆ ಎಂದರು.

ಭಷ್ಟಚಾರಗಳ ಪಿತಾಮಹ ಎಂದು ಹೇಳಿರುವ ವಿಜಯೇಂದ್ರ ಅವರ ಎಲ್ಲ ಹಗರಣಗಳನ್ನು ಬಿಚ್ಚಿಸುತ್ತೇನೆ ಎಂದು ಎಚ್ಚರಿಸಿದರು. ಗಂಡಸಾಗಿದ್ರೆ ಅವನು ಹೇಳಲಿ, ಅವನಿಗೆ ಗೌರವ ಕೊಡುತ್ತೇನೆ. ಅವನನ್ನ ಪಾರ್ಟಿ ಅಧ್ಯಕ್ಷ ಅಂತ ಒಪ್ಪಿಕೊಳ್ಳುತ್ತೇನೆ. ಯಾವ ಭ್ರಷ್ಟಾಚಾರ? ಏನು ತನಿಖೆಯಾಗಿದೆ? ಯಾವಾಗ ಆಗಿದೆ ಅಂತ ವಿವರಿಸಬೇಕೆಂದು ಸವಾಲ್ ಎಸೆದರು.

ನಾನು ಇಡಿ ಕೇಸ್ ನಲ್ಲಿ ಜೈಲಿಗೆ ಹೋಗಿದ್ದೆ‌. ಸುಪ್ರೀಂ ಕೋರ್ಟ್ ನಲ್ಲಿ ಇಡಿ ಕೇಸ್ ವಜಾ ಆಗಿದ್ದು ಗೊತ್ತಾ? ಇದಕ್ಕೆಲ್ಲ ಉತ್ತರ ಕೊಡುತ್ತೇನೆ ಸಮಯ ಬರಲಿ ಎಂದು ವಿಜಯೇಂದ್ರ ವಿರುದ್ಧ ಬಿಡದಿಯಲ್ಲಿ ಡಿಸಿಎಂ ಡಿಕೆಶಿ ಗುಡುಗಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments