Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ವಿರುದ್ಧ ಮಾನನಷ್ಟ ಕೇಸ್: ಯಡಿಯೂರಪ್ಪ ಎಚ್ಚರಿಕೆ

Webdunia
ಗುರುವಾರ, 2 ಮಾರ್ಚ್ 2017 (13:10 IST)
ಸಿಎಂ ಸಿದ್ದರಾಮಯ್ಯ ಹೋದಲ್ಲಿ ಬಂದಲ್ಲಿ ನನ್ನನ್ನು ಮಹಾನ್ ಭ್ರಷ್ಟ ಎಂದು ಟೀಕಿಸುತ್ತಿದ್ದಾರೆ. ಇದನ್ನೇ ಮುಂದುವರಿಸಿದಲ್ಲಿ ಅವರ ವಿರುದ್ಧ ಮಾನನಷ್ಟ ಕೇಸ್ ದಾಖಲಿಸುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ಸಿಎಂ ಸಿದ್ದರಾಮಯ್ಯ ಮಿತಿ ಮಿರಿ ತಮ್ಮ ವರ್ತನೆ ಮುಂದುವರಿಸಿದಲ್ಲಿ ಕಾನೂನು ಸಲಹೆಗಾರರನ್ನು ಸಂಪರ್ಕಿಸಿದ ನಂತರ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಕಿಡಿಕಾರಿದ್ದಾರೆ.
 
ನನ್ನ ಎಲ್ಲಾ ಪ್ರಕರಣಗಳ ಬಗ್ಗೆ ಕೋರ್ಟ್ ತೀರ್ಪು ನೀಡಿದ್ದು,ನಿರಪರಾಧಿ ಎಂದು ಘೋಷಿಸಿದೆ. ನ್ಯಾಯಾಲಯದ ಮೂಲಕವೇ ನಾನು ದೋಷಮುಕ್ತನಾಗಿದ್ದೇನೆ. ಆದಾಗ್ಯೂ, ಸಿಎಂ ಸಿದ್ದರಾಮಯ್ಯ ಪದೇ ಪದೇ ಮಹಾನ್ ಭ್ರಷ್ಟ ಎಂದು ಆರೋಪಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 
 
ಕಾಂಗ್ರೆ,ಸ್ ಸರಕಾರದ ಇಂತಹ ಬೆದರಿಕೆಗಳಿಗೆ ನಾನು ಜಗ್ಗಲ್ಲ, ಬಗ್ಗಲ್ಲ, ಸ್ಟೀಲ್ ಬ್ರಿಡ್ಜ್ ಯೋಜನೆಯಲ್ಲಿ 65 ಕೋಟಿ ರೂಪಾಯಿ ಸಂದಾಯವಾಗಿರುವುದು ಡೈರಿಯಲ್ಲಿ ನಮೂದಾಗಿದೆ. ಸಿಎಂಗೆ ತಾಕತ್ತಿದ್ರೆ ಡೈರಿ ಪ್ರಕರಣವನ್ನು ಸಿಬಿಐಗೆ ವಹಿಸಲಿ ಎಂದರು.
 
ಸಿಎಂ ಸಿದ್ದರಾಮಯ್ಯ ಮತ್ತು ಅವರ ಸಹದ್ಯೋಗಿಗಳು ಕಾಂಗ್ರೆಸ್ ಪಕ್ಷದ ಹೈಕಮಾಂಡ್‌ಗೆ ಸಾವಿರ ಕೋಟಿ ರೂಪಾಯಿ ಕಪ್ಪ ಸಲ್ಲಿಸಿರುವುದು ಡೈರಿಯಲ್ಲಿ ದಾಖಲಾಗಿದೆ. ಡೈರಿ ಸತ್ಯಾಸತ್ಯತೆ ಅರಿಯಲು ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments