Webdunia - Bharat's app for daily news and videos

Install App

ಶೀಘ್ರದಲ್ಲೇ ದಸರಾ ಲೆಕ್ಕ ಕೊಡುತ್ತೇನೆ-ಸಚಿವ ಎಸ್.ಟಿ.ಸೋಮಶೇಖರ್

Webdunia
ಶನಿವಾರ, 22 ಅಕ್ಟೋಬರ್ 2022 (15:49 IST)
ಮೈಸೂರು ದಸರಾ ಗೆ ಎಷ್ಟು ಖರ್ಚಾಗಿದೆ. ಈ ಬಗ್ಗೆ ಪೈಸೆ ಪೈಸೆ ಲೆಕ್ಕವನ್ನು ಕೊಡಲು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮುಂದಾಗಿದ್ದಾರೆ,. ಮೈಸೂರಿನಲ್ಲಿ ಮಾತನಾಡಿದ ಅವರು, 19 ಸಮಿತಿಯವರು ಲೆಕ್ಕ ಕೊಟ್ಟಿದ್ದಾರೆ. 2 ಉಪಸಮಿತಿಯವರು ಇನ್ನೂ ಲೆಕ್ಕ ಕೊಟ್ಟಿಲ್ಲ. ಅವರು ಲೆಕ್ಕ ಕೊಟ್ಟರೆ  ತಕ್ಷಣವೇ ಒಟ್ಟು ಖರ್ಚು ವೆಚ್ಚವನ್ನು ಜನತೆಯ ಮುಂದಿಡುತ್ತೇನೆ ಎಂದರು. ಮೈಸೂರಿನಲ್ಲಿ  ಪಾರಂಪರಿಕ ಕಟ್ಟಡಗಳು ಕುಸಿದ ವಿಚಾರದ ಬಗ್ಕುಗೆ ಮಾತ್ರ ಸೋಮಶೇಖರ್  ಹೆಚ್ಚು ಪ್ರತಿಕ್ರಯಿಸಲು ಇಷ್ಟಪಡಲಿಲ್ಲ.  ನಿರೀಕ್ಷೆಗೂ ಮೀರಿ ಮಳೆ ಸುರಿದಿದೆ. ಇದರಿಂದ ಪಾರಂಪರಿಕ ಕಟ್ಟಡಗಳಿಗೆ  ಹಾನಿಯಿಗುತ್ತಿರುವುದು ಗಮನಕ್ಕೆ ಬಂದಿದೆ. ಎಲ್ಲೆಲ್ಲಿ ಸಮಸ್ಯೆ ಆಗಿದೆ ಎಂದು ಮಾಹಿತಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ರು. ಇದೇ ವೇಳೆ ಜೆಡಿಎಸ್ ತೊರೆಯುವುದಿಲ್ಲವೆಂದು ಹೇಳಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡರ ಬಗ್ಗೆಯೂ ಸೋಮಶೇಖರ್ ಪ್ರತಿಕ್ರಯಿಸಿದ್ರು. J.T. ದೇವೇಗೌಡರ ನಡೆ ಮೀನಿನ ಹೆಜ್ಜೆ, ಎರಡನ್ನೂ ಕಂಡು ಹಿಡಿಯೋಕೆ ಆಗಲ್ಲ ಅಂತ ನಾನು ಮೊದಲೇ ಹೇಳಿದ್ದೆ ಎಂದು S.T.ಸೋಮಶೇಖರ್​​​ ವ್ಯಂಗ್ಯವಾಡಿದ್ರು. JTD ಜೆಡಿಎಸ್‌ನಲ್ಲೇ ಉಳಿದಿರುವುದು ವಿಶೇಷತೆ ಏನೂ ಇಲ್ಲ. ಬಿಜೆಪಿಯವರು ಅವರನ್ನು ಕರೆದಿರಲಿಲ್ಲ. ಕಾಂಗ್ರೆಸ್​​​ನವರ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನಾನಂತೂ ಅವರನ್ನು ಸಂಪರ್ಕ ಮಾಡಿಲ್ಲ ಎಂದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments