Webdunia - Bharat's app for daily news and videos

Install App

ಕಾಂಗ್ರೆಸ್ ಪಕ್ಷಕ್ಕೆ ದೊಡ್ಡದೊಂದು ಗುಡ್‌ಬೈ: ಎ.ಬಿ.ಮಲಕರೆಡ್ಡಿ

Webdunia
ಮಂಗಳವಾರ, 14 ನವೆಂಬರ್ 2017 (14:26 IST)
ನಾನು ಕಾಂಗ್ರೆಸ್ ಪಕ್ಷ ಬಿಡುತ್ತೇನೆ. ಆದರೆ, ಬೇರೆ ಯಾವುದೇ ಪಕ್ಷಕ್ಕೆ ಸೇರ್ಪಡೆಯಾಗುವುದಿಲ್ಲ ಎಂದು ಶಾಸಕ ಡಾ. ಎ.ಬಿ.ಮಲಕರೆಡ್ಡಿ ನೇರವಾಗಿ ಹೇಳಿರುವುದು ಕಂಡು ಸಿಎಂ ಕಕ್ಕಾಬಿಕ್ಕಿಯಾದರು ಎಂದು ಮೂಲಗಳು ತಿಳಿಸಿವೆ.
ಮಲಕರೆಡ್ಡಿ ಹೇಳಿಕೆಯಿಂದ ಆಘಾತಗೊಂಡ ಸಿಎಂ, ನಿಮ್ಮ ಆರೋಗ್ಯ ಚೆನ್ನಾಗಿದೆ ನೀವು ಇನ್ನು ಎರಡು ಬಾರಿ ಶಾಸಕರಾಗಬಹುದು ಎಂದು ಮನವೊಲಿಸುವ ಪ್ರಯತ್ನ ಮಾಡಿದರು ಎನ್ನಲಾಗಿದೆ.
 
ಆದರೆ, ತಮ್ಮ ತೀರ್ಮಾನಕ್ಕೆ ಬದ್ಧರಾಗಿರುವಂತೆ ಕಂಡು ಬಂದ ಶಾಸಕ ಮಲಕ ರೆಡ್ಡಿ, ಸರ್ ನಾನು 6 ಬಾರಿ ಶಾಸಕನಾಗಿದ್ದೇನೆ. ಎರಡು ಬಾರಿ ಸಚಿವನಾಗಿದ್ದೇನೆ. ಒಂದು ಅವಧಿಗೆ ಡೆಪ್ಯೂಟಿ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದೇನೆ. ಇನ್ನೇನಾಗಬೇಕು ಸರ್ ಎಂದು ತಿಳಿಸಿದ್ದಾರೆ.
 
ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ಸಿಎಂ ಸಿದ್ದರಾಮಯ್ಯಗೆ ಸ್ಪಷ್ಟವಾಗಿ ತಿಳಿಸಿದ್ದಾರೆ.
 
ಬೆಳಗಾವಿಯ ಸುವರ್ಣಸೌಧದಲ್ಲಿ ಉಭಯ ನಾಯಕರು ಮಾತನಾಡಿದ ನಂತರ ಸಿಎಂ ಸಿದ್ದರಾಮಯ್ಯ, ಮತ್ತೆ ನಾನು ನಿಮ್ಮೊಂದಿಗೆ ಮಾತನಾಡುತ್ತೇನೆ ಎಂದು ಹೇಳಿ ಹೊರಟುಹೋದ ಘಟನೆ ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments