ನಟರನ್ನ ನಾನು ದುರುಪಯೋಗಪಡಿಸಿಕೊಳ್ಳಲ್ಲ : ಕುಮಾರಸ್ವಾಮಿ

Webdunia
ಗುರುವಾರ, 6 ಏಪ್ರಿಲ್ 2023 (09:36 IST)
ಬೆಂಗಳೂರು : ನಟ ಸುದೀಪ್ ಅವರು ಸಿಎಂ ಬೊಮ್ಮಾಯಿ ಪರ ಪ್ರಚಾರ ಮಾಡೋದ್ರಿಂದ ನಮಗೇನು ತೊಂದರೆ ಇಲ್ಲ. ಸುದೀಪ್ ಪ್ರಚಾರಕ್ಕೆ ಹೆಚ್ಚು ಮಹತ್ವ ಕೊಡಬೇಕಿಲ್ಲ ಅಂತಾ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
 
ನಟ ಸುದೀಪ್ ಬೆಂಬಲದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಹಿಂದಿನಿಂದಲೂ ವಿಶ್ವಾಸದ ಮೇಲೆ ಹಲವು ನಟರು ಅಭ್ಯರ್ಥಿಗಳ ಪರ ಪ್ರಚಾರಕ್ಕೆ ಹೋಗ್ತಾರೆ, ಅದು ಮಾಮೂಲಿಯಾಗಿ ನಡೆಯುತ್ತಿದೆ. ಬೊಮ್ಮಾಯಿ ಮೇಲಿನ ವಿಶ್ವಾಸದಲ್ಲಿ ಸುದೀಪ್ ಪ್ರಚಾರ ಮಾಡ್ತೀನಿ ಅಂತಾ ಹೇಳಿದ್ದಾರೆ. ಇದು ಅವರ ನಡುವೆ ಇರುವ ವೈಯಕ್ತಿಕ ಸಂಬಂಧಗಳು. ಅದಕ್ಕೆ ಹೆಚ್ಚು ಮಹತ್ವದ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ. 

ಬಿಜೆಪಿ ಅವರು ಅಭಿವೃದ್ಧಿ ಮಾಡುವುದರಲ್ಲಿ ವಿಫಲರಾಗಿದ್ದಾರೆ. ಈ ರೀತಿ ಮಾಡಿಯೇ ಚುನಾವಣೆಯಲ್ಲಿ ಮತ ಪಡೆಯೋಕೆ ಮುಂದಾಗಿದ್ದಾರೆ. ಇದ್ಯಾವುದೂ ವರ್ಕ್ ಆಗಲ್ಲ. ನಟರನ್ನ ನೋಡೋಕೆ ಜನ ಬರ್ತಾರೆ. ಅಭಿಮಾನಿಗಳು ಜೈಕಾರ ಹಾಕ್ತಾರೆ, ಶಿಳ್ಳೆ ಹೊಡೆಯುತ್ತಾರೆ.

ನಟರು ಅನೇಕರ ಪರ ಪ್ರಚಾರಕ್ಕೆ ಹೋಗ್ತಾರೆ. ಕಾಂಗ್ರೆಸ್ ಪರವೂ ಹೋಗ್ತಾರೆ, ಬಿಜೆಪಿಗೂ ಹೋಗ್ತಾರೆ. ಬೇರೆ ಬೇರೆ ಕಡೆ ಹೋಗ್ತಾರೆ. ನಟರಲ್ಲಿ ಸ್ಥಿರತೆ ಇಲ್ಲ. ವೈಯಕ್ತಿಕ ಬಾಂಧವ್ಯ, ಸ್ನೇಹದ ಮೇಲೆ ಹೋಗ್ತಾರೆ. ಆದ್ರೆ ಜನ ಅಂತಿಮವಾಗಿ ತೀರ್ಮಾನ ಮಾಡ್ತಾರೆ ಅಂತಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಣಿಪುರದಲ್ಲಿ ಕೊನೆಗೂ ರಾಷ್ಟ್ರಪತಿ ಆಳ್ವಿಕೆ ಅಂತ್ಯ, ಸಿಎಂ ಆಗಿ ಯುಮ್ನಾಮ್

ರಾಜ್ಯದ ಜನರಿಗೆ ನಿಮ್ಮ ಸರಣಿ ಹಗರಣ, ಆಡಳಿತ ವೈಫಲ್ಯಗಳ ದರ್ಶನವಾಗಲಿ

ಕಳೆದೊಂದು ವರ್ಷದಲ್ಲಿ ದ.ಕ, ಉಡುಪಿ ಜಿಲ್ಲೆಗಳಲ್ಲಿ ರಸ್ತೆ ಅಪಘಾತಕ್ಕೆ ಅಮೂಲ್ಯ ಜೀವಗಳು ಬಲಿಯಾಗಿದೆಷ್ಟು ಗೊತ್ತಾ

ಕಾಂಗ್ರೆಸ್ ಪಕ್ಷದ ಲಿಂಗಾಯತ ಶಾಸಕರ ಸಭೆ ಬಗ್ಗೆ ಎಂಬಿ ಪಾಟೀಲ್ ಸ್ಫೋಟಕ ಮಾಹಿತಿ

ಸದನದಲ್ಲಿ ರೊಚ್ಚಿಗೆದ್ದ ಶಿವಲಿಂಗೇಗೌಡ, ಅಧಿಕಾರದ ಅಮಲಿನಲ್ಲಿ ಶಾಸಕನ ಗೂಂಡಾ ವರ್ತನೆ

ಮುಂದಿನ ಸುದ್ದಿ
Show comments