Webdunia - Bharat's app for daily news and videos

Install App

ಕುಮಾರಸ್ವಾಮಿ ಬಳಿ ಟಿಕೆಟ್ ಕೇಳಲ್ಲ: ಚೆಲುವರಾಯಸ್ವಾಮಿ

Webdunia
ಶುಕ್ರವಾರ, 27 ಜನವರಿ 2017 (14:19 IST)
ಮುಂಬರುವ ವಿಧಾನಸಭೆ ಚುನಾವಣೆಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಬಳಿ ಟಿಕೆಟ್ ಕೇಳಲ್ಲ. ಟಿಕೆಟ್ ನೀಡುವಂತೆ ಅರ್ಜಿಯನ್ನು ಸಹ ಸಲ್ಲಿಸಿಲ್ಲ ಎಂದು ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ನಾಗಮಂಗಲ ಕ್ಷೇತ್ರದ ಶಾಸಕ ಚೆಲುವರಾಯಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆ.ಗೋಪಾಲಯ್ಯರನ್ನು ಬಿಟ್ಟು ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಒಟ್ಟಾಗಿದ್ದೇವೆ. ನಮಗೆ ಜೆಡಿಎಸ್ ಪಕ್ಷ ನೀಡುವ ಟಿಕೆಟ್ ಮುಖ್ಯವಲ್ಲ. ಜನರು ನೀಡುವ ಟಿಕೆಟ್ ಮುಖ್ಯ ಎಂದು ಹೇಳಿದರು. 
 
ಜೆಡಿಎಸ್ ಪಕ್ಷದಿಂದ ನನಗೆ ನಾಗಮಂಗಲ ಕ್ಷೇತ್ರಕ್ಕೆ ಟಿಕೆಟ್ ಸಿಗಲ್ಲ. ಅದರಂತೆ, ರಮೇಶ್ ಬಾಬು ಹಾಗೂ ಬಂಡಿಸಿದ್ದೇಗೌಡರಿಗೂ ಟಿಕೆಟ್ ನೀಡಲ್ಲ. ಈ ಕುರಿತು ಮಂಡ್ಯ ಜೆಡಿಎಸ್ ನಾಯಕರು ನಿರ್ಣಯ ಕೈಗೊಂಡಿದ್ದಾರೆ ಎಂದು ಆರೋಪಿಸಿದರು.
 
ನಾವು ಯಾವ ಪಕ್ಷ ಸೇರಬೇಕು ಎಂದು ಇನ್ನು ನಿರ್ಧರಿಸಿಲ್ಲ. ಮಾರ್ಚ್ ಮೊದಲ ವಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಿ ಪರವಾಗಿಲ್ಲ ಎಂದು ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ ಶಾಸಕ ಚೆಲುವರಾಯಸ್ವಾಮಿ ತಿಳಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಎರಡು ದಿನಗಳಿಗೆ ಹವಾಮಾನದಲ್ಲಿ ಆಗಲಿದೆ ಮಹತ್ವದ ಬದಲಾವಣೆ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

ಮುಂದಿನ ಸುದ್ದಿ
Show comments