ಸಂಗೊಳ್ಳಿ ರಾಯಣ್ಣ ಬ್ರಿಗೇಡ್ಗೆ ಹೋಗಬಾರದು ಎಂದು ಪಕ್ಷದ ಹಿರಿಯರು ತಾಕೀತು ಮಾಡಿದ್ದಾರೆ. ಅವರ ಮಾತು ಗೌರವಿಸಿ ಬ್ರಿಗೇಡ್ಗೆ ಗೈರುಹಾಜರಾಗುತ್ತಿದ್ದೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಸಮಾವೇಶಕ್ಕೆ ಹೋಗುವುದಿಲ್ಲ. ಇದರಿಂದ ಪಕ್ಷದ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ಗೊಂದಲ ಉಂಟಾಗುತ್ತದೆ ಎನ್ನುವ ಕಾರಣದಿಂದ ಗೈರುಹಾಜರಾಗಿದ್ದೇನೆ ಎಂದು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರ ಬರಗಾಲ ನಿರ್ವಹಣೆಯಲ್ಲಿ ವಿಫಲವಾಗಿದೆ. ರೈತರ ಸಾಲ ಮನ್ನಾ ಮಾಡಲು ಮುಂದಾಗುತ್ತಿಲ್ಲ. ಭಾರಿ ಪ್ರಮಾಣದ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಗುಡುಗಿದರು.
ಒಂದು ವೇಳೆ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಲ್ಲಿ ಕೇವಲ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುತ್ತದೆ. ರೈತರಿಗಾಗಿ ಹೊಸ ಯೋಜನೆಗಳನ್ನು ಜಾರಿಗೆ ತರುತ್ತದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.