Webdunia - Bharat's app for daily news and videos

Install App

ನಾನು ತಗ್ಗೋ ಮಗನೇ ಅಲ್ಲ: ಯತ್ನಾಳ್‌ ತಿರುಗೇಟು

Webdunia
ಶನಿವಾರ, 7 ಮೇ 2022 (16:56 IST)
ನನ್ನನ್ನು ಪಕ್ಷದಿಂದ ಹೊರಗೆ ಹಾಕಿಬಿಡ್ತಾರೆ, ಶಿಸ್ತು ಕ್ರಮ ಕೈಗೊಳ್ತಾರೆ ಅಂತ ಯಾರೂ ಖುಷಿಪಡಬೇಡಿ. ಅದು ಯಾವುದೂ ಆಗಲ್ಲ. ನಾನು ತಗ್ಗೋ ಮಗನೇ ಅಲ್ಲ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ.
ವಿಜಯಪುರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಸತ್ಯ ಮಾತನಾಡಿದ್ದೇನೆ. ಸತ್ಯ ಯಾವಾಗಿತ್ತಿದ್ದರೂ ಚಿನ್ನ ಇದ್ದಂತೆ. ಸುಳ್ಳು ಹೇಳಿಲ್ಲ ನಾನು ಎಂದು ಸಿಎಂ ಸ್ಥಾನಕ್ಕೆ 2500 ಕೋಟಿ ಆಫರ್‌ ಮಾಡಿದ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡರು.
ಟೀವಿ ಚಾನೆಲ್‌ ಗಳಲ್ಲಿ ಕುಳಿತು. ಯತ್ನಾಳ್‌ ಉಚ್ಛಾಟನೆ ಮಾಡಲು ಹೈಕಮಾಂಡ್‌ ಗೆ ತಾಕತ್ತು ಇಲ್ಲವಾ? ಯತ್ನಾಳ್‌ ಫಿಲ್ಟರ್‌ ಇಲ್ಲದ ಹೇಳಿಕೆ ನೀಡ್ತಾರೆ ಅಂತೆಲ್ಲಾ ಹೇಳ್ತಾರೆ. ಸತ್ಯ ಹೇಳಬೇಕಾದರೆ ಫಿಲ್ಟರ್‌ ಇರಲ್ಲ. ಸುಳ್ಳು ಹೇಳಬೇಕಾದರೆ ಫಿಲ್ಟರ್‌ ಇರುತ್ತೆ ಎಂದು ಮಾಧ್ಯಮಗಳಿಗೆ ತಿರುಗೇಟು ನೀಡಿದರು.
ನನ್ನ ಹೇಳಿಕೆ ಹಿಡಿದುಕೊಂಡು ಡಿಕೆ ಶಿವಕುಮಾರ್‌ ಟ್ವಿಟ್‌ ಮಾಡುತ್ತಿದ್ದಾರೆ. ಅಂದರೆ ಅವರಿಗೆ ನನ್ನ ಬಗ್ಗೆ ಭಯ ಶುರುವಾಗಿದೆ ಅಂತ ಅರ್ಥ. ಬಿಬಿಎಂಪಿ ಎಂಬ ಚರಂಡಿಯನ್ನು ಅವರು ಬಿದ್ದು ಒದ್ದಾಡುತ್ತಿದ್ದಾರೆ. ಅವರು ನನಗೆ ಹೇಳುವ ಅಗತ್ಯವಿಲ್ಲ ಎಂದು ಯತ್ನಾಳ್‌ ತಿರುಗೇಟು ನೀಡಿದರು.
ಪಿಎಸ್‌ ಐ ನೇಮಕಾತಿ ಅಕ್ರಮದಲ್ಲಿ ಸಚಿವರ ಹೆಸರು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಅಶ್ವಥ್‌ ನಾರಾಯಣ್‌ ಮೇಲಿನ ಆರೋಪ ಸುಳ್ಳು ಅನ್ನಿಸುತ್ತೆ. ಅವರಿಗೆ ಯಾವುದೇ ತೊಂದರೆ ಆಗಲ್ಲ ಬಿಡಿ ಎಂದು ಯತ್ನಾಳ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತನಿಖೆ ಮುನ್ನಾ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರಬಾರದು: ಸ್ಪೀಕರ್ ಯುಟಿ ಖಾದರ್‌

ಮುಡಾ ಹಗರಣದಲ್ಲಿ ಸಿಎಂ ಪತ್ನಿಗೆ ರಿಲೀಫ್: ಇಡಿಗೆ ಸುಪ್ರೀಂಕೋರ್ಟ್ ಛೀಮಾರಿ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಧರ್ಮಸ್ಥಳ ಮಂಜುನಾಥನಿಗೆ ಕೆಟ್ಟ ಹೆಸರು ತಂದ್ರೆ ಈ ಸರ್ಕಾರ ಸರ್ವನಾಶವಾಗುತ್ತದೆ: ಜನಾರ್ಧನ ರೆಡ್ಡಿ

ಮುಂದಿನ ಸುದ್ದಿ
Show comments