Select Your Language

Notifications

webdunia
webdunia
webdunia
webdunia

ನಾನು ಸುಳ್ಳು ಹೇಳುವುದಿಲ್ಲ, ಈ ಬಾರಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರುತ್ತದೆ: ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌

Kothur Manjunath

sampriya

, ಸೋಮವಾರ, 3 ಜೂನ್ 2024 (19:30 IST)
Photo By X
ಕೋಲಾರ: ಲೋಕಸಭೆ ಚುನಾವಣೆ ಫಲಿತಾಂಶ ಹೊರಬೀಳಲು ಕ್ಷಣಗಣನೆ ಆರಂಭವಾಗುತ್ತಿದ್ದ ಹೊತ್ತಲ್ಲಿ ಕಾಂಗ್ರೆಸ್‌ ಶಾಸಕ ಕೊತ್ತೂರು ಮಂಜುನಾಥ್‌ ಅವರು ದೇಶದಲ್ಲಿ ಮತ್ತೇ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಬಾರಿ ಕೇಂದ್ರದಲ್ಲಿ ಬಿಜೆಪಿ ಅಧಿಕಾರ ಹಿಡಿಯಲಿದೆ. ನಾನು ಕಾಂಗ್ರೆಸ್‌ ಶಾಸಕನಾದರೂ ನಿಜ ಮಾತನಾಡಬೇಕು. 2029ಕ್ಕೆ ದೇಶದಲ್ಲಿ ಕಾಂಗ್ರೆಸ್‌ ಸರ್ಕಾರ ಬರಲಿದೆ’ ಎಂದು ಭವಿಷ್ಯ ನುಡಿದರು.

ಚುನಾವಣೋತ್ತರ ಸಮೀಕ್ಷೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಹೇಳುತ್ತಿದೆ. ಇನ್ನೂ ನಮ್ಮವರು ಕಾಂಗ್ರೆಸ್‌ ಬರುತ್ತದೆ ಎಂದು ಹೇಳುತ್ತಿದ್ದಾರೆ. ಆದರೆ ನಾನು ನಾವೇ ಅಧಿಕಾರಕ್ಕೆ ಬರುತ್ತೇವೆಂದು ಸುಳ್ಳು ಹೇಳುವುದಿಲ್ಲ. ಸದ್ಯ ಬಿಜೆಪಿ ಅಧಿಕಾರಕ್ಕೆ ಬರುವ  ಎಲ್ಲ ಲಕ್ಷಣಗಳಿವೆ. ಈ ಸಲ ಅವರೇ ಬರಲಿ.  ನಮ್ಮ ಗುರಿ 2029ಕ್ಕೆ. ಮುಂದಿನ ಚುನಾವಣೆಯಲ್ಲಿ ಗೆಲ್ಲಲು ನಾವು ಈಗಿನಿಂದಲೇ ತಯಾರಿ ನಡೆಸುತ್ತೇವೆ’ ಎಂದರು.

‘ರಾಜ್ಯದಲ್ಲಿ 50: 50ಇದೆ. ಕೋಲಾರ ಕ್ಷೇತ್ರದಲ್ಲಿ ನಾವು 29 ಸಾವಿರ ಮತಗಳಿಂದ ಗೆಲ್ಲುತ್ತೇವೆ’ ಎಂದು ಹೇಳಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಸಮೀಕ್ಷೆಯಿಂದ ರಾಜ್ಯದ ಸಿಎಂ, ಸಚಿವರಿಗೆ ಎದೆಬಡಿತ ಜೋರಾಗಿದೆ: ವಿಜಯೇಂದ್ರ