Select Your Language

Notifications

webdunia
webdunia
webdunia
webdunia

`ಯಡಿಯೂರಪ್ಪ ಎಲ್ಲೇ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸುತ್ತೇನೆ’

`ಯಡಿಯೂರಪ್ಪ ಎಲ್ಲೇ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸುತ್ತೇನೆ’
ರಾಯಚೂರು , ಭಾನುವಾರ, 24 ಸೆಪ್ಟಂಬರ್ 2017 (13:21 IST)
ಮಾಜಿ ಸಿಎಂ ಯಡಿಯೂರಪ್ಪ ಉತ್ತರ ಕರ್ನಾಟಕದ ಯಾವ ಕ್ಷೇತ್ರದಲ್ಲಿ ಸ್ಪರ್ಧಿಸಿದರೂ ಅವರ ವಿರುದ್ಧ ಸ್ಪರ್ಧಿಸಲು ಸಿದ್ಧ ಕೋಲಾರದ ಪಕ್ಷೇತರ ಶಾಸಕ ವರ್ತೂರು ಪ್ರಕಾಶ್ ಹೇಳಿದ್ಧಾರೆ.

ರಾಯಚೂರಿನಲ್ಲಿ ಮಾತನಾಡಿದ ವರ್ತೂರು ಪ್ರಕಾಶ್, ಯಡಿಯೂರಪ್ಪ ಕಲಿಯುಗದ ಶಕುನಿ ಇದ್ದಂತೆ, ಸಿದ್ದರಾಮಯ್ಯ ಕಲಿಯುಗದ ಕೃಷ್ಣನಿದ್ದಂತೆ ಎಂದು ಬಣ್ಣಿಸಿದರು. ಉತ್ತರ ಕರ್ನಾಟಕದ ಯಾವುದೇ ಕ್ಷೇತ್ರದಲ್ಲಿ ಯಡಿಯೂಪ್ಪ ಸ್ಪರ್ಧಿಸಿದರು. ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ವರ್ತೂರು ಪ್ರಕಾಶ್ ಹೇಳಿದ್ದಾರೆ. ಇದೇವೇಳೆ, ಕಾಂಗ್ರೆಸ್ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದಾಗಿ ವರ್ತೂರು ಪ್ರಕಾಶ್ ಹೇಳಿದ್ದಾರೆ.

ವಿಧಾನಸಭೆ ಚುನಾವನೆ ಸಮೀಪವಾಗುತ್ತಿದ್ದಂತೆ ರಾಜಕೀಯ ಪಕ್ಷಗಳಲ್ಲಿ ಚಟುವಟಿಕೆ ಗರಿಗೆದರಿದ್ದು,  ಹೈಕಮಾಂಡ್ ಆದೇಶದಂತೆ ಯಡಿಯೂರಪ್ಪ ಉತ್ತರ ಕರ್ನಾಟಕದಲ್ಲಿ ಸ್ಪರ್ಧೆಗೆ ಮುಂದಾಗಿದ್ದಾರೆ. ಬಾಗಲಕೋಟೆ ಅಥವಾ ವಿಜಯಪುರದಲ್ಲಿ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಪ್ರತ್ಯೇಕ ಲಿಂಗಾಯತ ಧರ್ಮಕ್ಕಾಗಿ ಬೃಹತ್ ಸಮಾವೇಶ