Webdunia - Bharat's app for daily news and videos

Install App

ಜೆಡಿಎಸ್ ಪರವಾಗಿ ನಾನು ಇದ್ದೇನೆ...!!!

Webdunia
ಗುರುವಾರ, 4 ನವೆಂಬರ್ 2021 (17:20 IST)
ದೀಪಾವಳಿ ಹಿನ್ನೆಲೆ ರಾಜ್ಯ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ಲಕ್ಷ್ಮೀ ಪೂಜೆ ನೆರವೇರಿಸಿದ್ದಾರೆ. ಈ ಪೂಜೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಟಿ.ಎ. ಶರವಣ ಕೂಡ ಭಾಗಿಯಾಗಿದ್ದರು. ಈ ಸಂದರ್ಭದಲ್ಲಿ ಹೆಚ್​ಡಿ ದೇವೇಗೌಡ ಸುದ್ದಿಗೋಷ್ಟಿ ನಡೆಸಿದರು.ಪ್ರಧಾನಿ ಹೆಚ್.​ಡಿ.ಡಿ 2023 ಕ್ಕೆ ಚುನಾವಣೆಗೆ ನಾನು ಆಕ್ಟೀವ್ ಆಗಿ ಕೆಲಸ ಮಾಡಬೇಕು ಅಂತ ತೀರ್ಮಾನ ಮಾಡಿದ್ದೇನೆ ಎಂದರು. ಅಲ್ಲದೆ ಪಕ್ಷದ ಉಳಿದ ನಾಯಕರಿಗೂ ಆಕ್ಟೀವ್ ಆಗಿ ಕೆಲಸ ಮಾಡಬೇಕು ಎಂದು ಆದೇಶಿಸಿದ್ದಾರಂತೆ. ಅಕ್ಟೋಬರ್ 8 ರಿಂದ ಎರಡನೇ ಹಂತದ ಕಾರ್ಯಗಾರ ನಡೆಯಲಿದ್ದು , ಅಲ್ಲಿಂದ ಕಾರ್ಯಕ್ರಮ ಹಾಗೆಯೇ ಮುಂದುವರೆಯಲಿದೆ ಎಂದರು. ಉಪ ಚುನಾವಣೆಯ ಫಲಿತಾಂಶವನ್ನ ಸ್ವೀಕಾರ ಮಾಡ್ತೀವಿ ಅಂದ ದೊಡ್ಡ ಗೌಡ್ರು, ಜನರ ತೀರ್ಮಾನದಂತೆ ಹೋಗ್ತೀವಿ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಹಣದಿಂದ ಬಲಿಷ್ಟವಾಗಿವೆ. ಪಕ್ಷ ಕಟ್ಟೋದಕ್ಕೆ ಆರ್ಥಿಕ ಶಕ್ತಿ ಮುಖ್ಯವಾಗಿದ್ದು. ಪ್ರಾದೇಶಿಕ ಪಕ್ಷ ಕಟ್ಟುವುದಕ್ಕೆ ಎಲ್ಲ ನಾಯಕರು ಜವಾಬ್ದಾರಿಯನ್ನ ಹೊರಬೇಕು ಎಂದು ದೇವೇಗೌಡರು ತಿಳಿಸಿದರು..

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments