Webdunia - Bharat's app for daily news and videos

Install App

ರಾಜಕೀಯದಿಂದ ದೂರ ಉಳಿಯುತ್ತೇನೆ : ನಿಖಿಲ್ ಕುಮಾರಸ್ವಾಮಿ

Webdunia
ಮಂಗಳವಾರ, 19 ಸೆಪ್ಟಂಬರ್ 2023 (11:30 IST)
ಜೆಡಿಎಸ್ ಪಕ್ಷದ ಯುವ ಮುಖಂಡ, ನಟ ನಿಖಿಲ್ ಕುಮಾರಸ್ವಾಮಿ ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದಾರೆ. ಬೀದರ್ ನಲ್ಲಿ ಮಾತನಾಡಿರುವ ನಿಖಿಲ್, ‘ರಾಜಕೀಯದಿಂದ ದೂರವಿರುತ್ತೇನೆ. ಆದರೆ, ಸಾಮಾನ್ಯ ಕಾರ್ಯಕರ್ತನಾಗಿ ಲೋಕಸಭೆ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಳ್ಳುತ್ತೇನೆ. ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡಲಾರೆ’ ಎಂದಿದ್ದಾರೆ.
 
ಈ ಹಿಂದೆ ಕುಮಾರಸ್ವಾಮಿ ಅವರು ಇದೇ ಮಾತುಗಳನ್ನು ಆಡಿದ್ದರು. ಸಿನಿಮಾದಲ್ಲಿ ಸಾಕಷ್ಟು ಅವಕಾಶಗಳು ಇರುವುದರಿಂದ ಅಲ್ಲಿಯೇ ನೆಲೆಯೂರುವಂತೆ ಹೇಳಿದ್ದೇನೆ. ರಾಜಕಾರಣಕ್ಕೆ ನಿಖಿಲ್ ಬರುವುದು ಬೇಡ ಎಂದು ಕುಮಾರಸ್ವಾಮಿ ಹೇಳಿಕೆ ನೀಡಿದ್ದರು. ತಂದೆಯ ಮಾತನ್ನು ಪುತ್ರ ನಿಖಿಲ್ ಮತ್ತೆ ನೆನಪಿಸಿದ್ದಾರೆ.

ಸದ್ಯ ನಿಖಿಲ್ ಹೊಸ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ. ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಈಗ ಇವರ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಿಖಿಲ್ ಕುಮಾರ್ ನಟಿಸುತ್ತಿದ್ದರೆ, ಲಕ್ಷ್ಮಣ್ ಅವರು ನಿರ್ದೇಶಕರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಬೆಂಗಳೂರಿನಲ್ಲಿ ಬಾಳೆ ಎಲೆ ರೇಟು ಬಲು ದುಬಾರಿ

Hebbal Accident: ಹೆಬ್ಬಾಳದಲ್ಲಿ ತಡರಾತ್ರಿ ಸರಣಿ ಅಪಘಾತ: ಲಾರಿ ಚಾಲಕ ದುರ್ಮರಣ

CET Results live: ಕೆಲವೇ ಕ್ಷಣಗಳಲ್ಲಿ ಸಿಇಟ ಫಲಿತಾಂಶ: ಎಲ್ಲಿ, ಹೇಗೆ ಚೆಕ್ ಮಾಡಬೇಕು ಇಲ್ಲಿದೆ ವಿವರ

Viral video: ನಡು ರಸ್ತೆಯಲ್ಲೇ ಮಹಿಳೆ ಜೊತೆ ಬಿಜೆಪಿ ನಾಯಕನ ಕಾಮದಾಟ, ಥೂ ಎಂದ ಜನ

ಮುಂದಿನ ಸುದ್ದಿ
Show comments