Select Your Language

Notifications

webdunia
webdunia
webdunia
webdunia

ಮುಸ್ಲಿಮರ ಮನೆಗಳಿಗೆ ಹೋಗಿ ಖರ್ಗೆ ಬಣ್ಣ ಬಯಲು ಮಾಡ್ತೇನೆ: ಖಮರುಲ್

ಖಮರುಲ್ ಇಸ್ಲಾಂ
ಬೆಂಗಳೂರು , ಮಂಗಳವಾರ, 21 ಜೂನ್ 2016 (17:19 IST)
ಸಂಪುಟ ಪುನಾರಚನೆ ಸಂದರ್ಭದಲ್ಲಿ ನನ್ನನ್ನು ಸಂಪುಟದಿಂದ ಕೈಬಿಡುವುದಿಲ್ಲವೆಂದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಖರ್ಗೆಯವರ ಸಲಹೆಯಂತೆ ನನಗೆ ಸಚಿವ ಸ್ಥಾನದಿಂದ ಕೊಕ್ ನೀಡಿದ್ದಾರೆ ಎಂದು ಮಾಜಿ ಸಚಿವ ಖಮರುಲ್ ಇಸ್ಲಾಂ ಆಕ್ರೋಶ ವ್ಯಕ್ತಪಡಿಸಿದ್ದಾರೆ.
 
ಪುತ್ರ ಪ್ರಿಯಾಂಕಾ ಖರ್ಗೆಗೆ ಸಚಿವ ಸ್ಥಾನ ಕೊಡಿಸಲು ನನಗೆ ಸಚಿವ ಸ್ಥಾನದಿದ ಕಿತ್ತುಹಾಕಲಾಗಿದೆ. ಜಿಲ್ಲೆಯಲ್ಲಿರುವ ಮುಸ್ಲಿಂರ ಮನೆ ಮನೆಗೆ ತೆರಳಿ ಖರ್ಗೆಯವರ ಬಣ್ಣ ಬಯಲು ಮಾಡ್ತೇನೆ ಎಂದು ಸವಾಲ್ ಹಾಕಿದ್ದಾರೆ.
 
ಸಂಪುಟ ಪುನಾರಚನೆ ಸಂದರ್ಭದಲ್ಲಿ ನವದೆಹಲಿಯಲ್ಲಿ ಮಲ್ಲಿಕಾರ್ಜುನ್ ಖರ್ಗೆಯವರನ್ನು ಭೇಟಿ ಮಾಡಿದ್ದಾಗ ಸಚಿವ ಸ್ಥಾನದಿಂದ ಕೈಬಿಡುವುದಿಲ್ಲ ಎಂದು ನನಗೆ ಭರವಸೆ ನೀಡಿದ್ದರು. ಆದರೆ, ಯಾವುದೇ ಸುಳಿವು ನೀಡದೆ ನನಗೆ ಸಂಪುಟದಿಂದ ಕಿತ್ತುಹಾಕಲಾಗಿದೆ ಎಂದು ಕಿಡಿಕಾರಿದರು.
 
ಕಳೆದ 40 ವರ್ಷಗಳಿಂದ ರಾಜಕೀಯದಲ್ಲಿದ್ದೇನೆ. ಇಷ್ಟು ವರ್ಷ ನನ್ನನ್ನು ದುಡಿಸಿಕೊಂಡು ಈಗ ನನ್ನನ್ನು ಬೀಸಾಕುತ್ತೀರಾ? ಬೀದರ್, ಕಲಬುರಗಿ, ರಾಯಚೂರು ಜಿಲ್ಲೆಗಳಲ್ಲಿ ಚುನಾವಣೆ ಬಂದಾಗ ಮಾತ್ರ ನಾನು ನೆನಪಾಗುತ್ತೇನೆ. ಚುನಾವಣೆ ನಂತರ ಕಾಂಗ್ರೆಸ್ ಪಕ್ಷಕ್ಕೆ ನನ್ನ ಅವಶ್ಯಕತೆ ಕಾಣುವುದಿಲ್ಲ ಎಂದು ಮಾಜಿ ಸಚಿವ ಖಮರುಲ್ ಇಸ್ಲಾಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

ಅಂಬರೀಶ್, ಶ್ರೀನಿವಾಸ್ ಪರ ಎಚ್‌.ಡಿ.ದೇವೇಗೌಡ ಬ್ಯಾಟಿಂಗ್