Webdunia - Bharat's app for daily news and videos

Install App

ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ : ಭವಾನಿ ರೇವಣ್ಣ

Webdunia
ಬುಧವಾರ, 21 ಸೆಪ್ಟಂಬರ್ 2022 (10:32 IST)
ಹಾಸನ : ವಿಧಾಸಭಾ ಚುನಾವಣೆಯಲ್ಲಿ ಸ್ಪರ್ಧಿಸುವಂತೆ ಸಾಕಷ್ಟು ಜನ ನನಗೆ ಒತ್ತಡ ಹೇರುತ್ತಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದಿಂದ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಕೆಲಸ ಮಾಡುತ್ತೇನೆ.

ಜೆಡಿಎಸ್  ವರಿಷ್ಠರ ತೀರ್ಮಾನಕ್ಕೆ ನಾನು ಬದ್ಧ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಹಾಸನದ ಎರಡನೇ ವಾರ್ಡ್ನ ಅಶೋಕ ಬಡಾವಣೆಯಲ್ಲಿ 12.40 ಲಕ್ಷ ರೂ. ವೆಚ್ಚದ ಕಾಮಗಾರಿಗೆ ಪುತ್ರ ಹಾಗೂ ಸಂಸದ ಪ್ರಜ್ವಲ್ ಪರವಾಗಿ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು,

ಯಾರಿಗೆ ಟಿಕೆಟ್ ಕೊಟ್ಟರೂ ಭವಾನಿಯಾಗಿ, ರೇವಣ್ಣ ಅವರ ಪತ್ನಿಯಾಗಿ, ಪ್ರಜ್ವಲ್, ಸೂರಜ್ ಅವರ ತಾಯಿಯಾಗಿ ಕಾರ್ಯಕರ್ತರ ಜೊತೆ ಏನು ಕೆಲಸ ಮಾಡುತ್ತಿದ್ದೇನೋ, ಮುಂದೆಯೂ ಅದೇ ಕೆಲಸ ಮಾಡುತ್ತೇನೆ ಎಂದಿದ್ದಾರೆ.

ಸಾರ್ವಜನಿಕರು ನನ್ನನ್ನು ತಮ್ಮ ಮನೆ ಮಗಳು ಎನ್ನುವ ಭಾವನೆಯಲ್ಲಿ ಕಾರ್ಯಕ್ರಮಕ್ಕೆ ಕರೆದಾಗ ಬರುತ್ತಿದ್ದೇನೆ. ನನ್ನ ಮಕ್ಕಳು ಮಾತ್ರ ಅಲ್ಲ, ದೇವೇಗೌಡರ ರಾಜಕೀಯ ಜೀವನದಲ್ಲಿ ಹಾಸನದ ಜನರ ಜೊತೆ ನಿಂತಿದ್ದಾರೆ. ಅವರು ಕರೆದಾಗ ಬರದೆ ಇರಬಾರದು ಎನ್ನುವ ಕಾರಣಕ್ಕೆ ಬರುತ್ತಾ ಇದ್ದೇನೆ ಅಷ್ಟೇ. ಅದನ್ನು ಬಿಟ್ಟರೆ ಬೇರೆ ಯಾವುದೇ ಚರ್ಚೆ ಇಲ್ಲ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ಯಾವ ಜಿಲ್ಲೆಗಳಿಗೆ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಇಲ್ಲಿದೆ ವಿವರ

ಕರಾವಳಿಯಲ್ಲಿ ರಣಭೀಕರ ಮಳೆ ನಡುವೆ ಮುಂದಿನ 24ಗಂಟೆ ಹೇಗಿರಲಿದೆ ಗೊತ್ತಾ ಹವಾಮಾನ

ಭ್ರಷ್ಟಾಚಾರ ಆರೋಪ ಹೊತ್ತಿರುವವರು, ಪಬ್‌ಗಳಲ್ಲಿ ಗಲಾಟೆ ಮಾಡಿದವರಿಗೆ ಕೊನೆಗೂ ಮಂತ್ರಿಸ್ಥಾನ

ಕೊನೆಗೂ ಡಿಕೆ ಶಿವಕುಮಾರ್ ಸಂಪುಟ ಸೇರಿದ 19 ಸಚಿವರು ಇವರೇ

ದೆಹಲಿ ಪ್ರತಿಭಟನೆಯಲ್ಲಿ ಭಾಗಿಯಾದವರ ವಿರುದ್ಧದ ಎಫ್ಐಆರ್ ಹಿಂಪಡೆಯುವ ಬಗ್ಗೆ ದೆಹಲಿ‌ ಕೋರ್ಟ್ ಮಹತ್ವದ ಸೂಚನೆ

ಮುಂದಿನ ಸುದ್ದಿ
Show comments