Webdunia - Bharat's app for daily news and videos

Install App

ಈ ಜನ್ಮದಲ್ಲಿ ಬ್ರಿಗೇಡ್ ಒಪ್ಪುವುದಿಲ್ಲ: ಯಡ್ಡಿ

Webdunia
ಭಾನುವಾರ, 22 ಜನವರಿ 2017 (13:16 IST)
ಈ ಜನ್ಮದಲ್ಲಿ ಬ್ರಿಗೇಡ್ ಚಟುವಟಿಗೆ ಒಪ್ಪುವ ಪ್ರಶ್ನೆಯೇ ಇಲ್ಲ, ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ಎಸ್ ಯಡಿಯೂರಪ್ಪ ಕಡ್ಡಿ ಮುರಿದಂತೆ ಹೇಳಿದ್ದಾರೆ.

ಈಶ್ವರಪ್ಪ ಬ್ರಿಗೇಡ್ ಸಭೆಗೆ ಹೋಗುವುದು ಸರಿಯಲ್ಲ.ಇಲ್ಲಿ ಕಾರ್ಯಕಾರಿಣಿ ಸಭೆ ನಡೆಯುತ್ತಿರುವಾಗ ಇನ್ನೆಲ್ಲೋ ಬ್ರಿಗೇಡ್ ಸಮಾವೇಶದಲ್ಲಿ ಪಾಲ್ಗೊಂಡ್ರೆ ತಪ್ಪು ಸಂದೇಶ ಹೋಗುತ್ತೆ. ಅವರಿಗೆ ಯಾವ ಸಂದೇಶವನ್ನು ನೀಡಬೇಕಿತ್ತೋ ಅದನ್ನು ನಿನ್ನೆ ನೀಡಿಯಾಗಿದೆ. ಪಕ್ಷದ ಕಾರ್ಯಕರ್ತರ್ಯಾರು ಕೂಡ ಬ್ರಿಗೇಡ್ ಸಮಾವೇಶದಲ್ಲಿ ಭಾಗವಹಿಸಬಾರದೆಂದು ಸೂಚಿಸಿದ್ದೇವೆ. ರಾಷ್ಟ್ರೀಯ ನಾಯಕರು ಸೂಕ್ತ ಸಮಯದಲ್ಲಿ ಸೂಕ್ತ ಕ್ರಮ ಕೈಗೊಂಡು ಸಮಸ್ಯೆ ಬಗೆಹರಿಸಲಿದ್ದಾರೆ. ಇದನ್ನೆಲ್ಲ ರಾಜ್ಯ ಉಸ್ತುವಾರಿ ಮುರಳೀಧರ ರಾವ್ ಗಮನಕ್ಕೆ ತಂದಿದ್ದೇನೆ ಎಂದು ಯಡ್ಡಿ ಹೇಳಿದ್ದಾರೆ.
 
ಇನ್ನಾದರೂ ಅವರು ತಮ್ಮಲ್ಲಿ ಬದಲಾವಣೆ ಮಾಡಿಕೊಳ್ಳಲಿ. ಪ್ರತಿಪಕ್ಷದ ನಾಯಕರಾಗಿ ಇವೆಲ್ಲವನ್ನು ಅವರು ಅರ್ಥ ಮಾಡಿಕೊಳ್ಳಬೇಕು. ಬ್ರಿಗೇಡ್ ವಿಷಯವೊಂದನ್ನು ಬಿಟ್ಟರೆ ನಮ್ಮ ನಡುವೆ ಇನ್ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಯಡಿಯೂರಪ್ಪ ಸ್ಪಷ್ಟ ಪಡಿಸಿದ್ದಾರೆ. 
 
ಪಕ್ಷದ ಸಂಘಟನೆಗೆ ಧಕ್ಕೆಯಾಗಬಾರದು. ಈ ಜನ್ಮದಲ್ಲಿ ಬ್ರಿಗೇಡ್ ಚಟುವಟಿಕೆ ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಮಾಜಿ ಸಿಎಂ ಗುಡುಗಿದ್ದಾರೆ.
 
ಇನ್ನೊಂದೆಡೆ ಯಡಿಯೂರಪ್ಪ ಅವರ ಮಾತನ್ನು ಲೆಕ್ಕಕ್ಕೆ ತೆಗೆದುಕೊಳ್ಳದ ಈಶ್ವರಪ್ಪ ಪಕ್ಷದ ಕಾರ್ಯಕಾರಣಿ ಸಭೆ ಬಳಿಕ  ಬ್ರಿಗೇಡ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಲು ತೆರಳುವುದಾಗಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments