Select Your Language

Notifications

webdunia
webdunia
webdunia
webdunia

ನಾನು ಬದುಕಿರುವುದೇ ನಾಡಿನ ಕ್ಷೇಮಕ್ಕಾಗಿ: ದೇವೇಗೌಡ

ಎಚ್.ಡಿ.ದೇವೇಗೌಡ
ಚಿಕ್ಕಬಳ್ಳಾಪುರ , ಶುಕ್ರವಾರ, 11 ನವೆಂಬರ್ 2016 (20:27 IST)
ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಕಾಂಗ್ರೆಸ್‌ನಿಂದ ರಾಜ್ಯಕ್ಕೆ ಅನ್ಯಾಯವಾಗುತ್ತಿರುವುದರಿಂದ ಪ್ರಾದೇಶಿಕ ಪಕ್ಷವಾದ ಜೆಡಿಎಸ್ ಪಕ್ಷವನ್ನು ಮತದಾರರು ಆಯ್ಕೆ ಮಾಡಬೇಕು ಎಂದು ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಜಿಲ್ಲೆಯಲ್ಲಿ ಮಾತನಾಡಿದ ಅವರು, ನಾನು ಬದುಕಿರುವುದೇ ನಾಡಿನ ಕ್ಷೇಮಕ್ಕಾಗಿ. ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವುದು ಖಚಿತ. ಸಮ್ಮಿಶ್ರ ಸರಕಾರ ರಚನೆಗೆ ಆಸ್ಪದ ನೀಡಬೇಡಿ ಎಂದು ಮತದಾರರಲ್ಲಿ ಮನವಿ ಮಾಡಿದರು.
 
ಸ್ವಾತಂತ್ರ್ಯ ಬಂದು 65 ವರ್ಷಗಳಾದರೂ ರಾಜ್ಯಕ್ಕೆ ನ್ಯಾಯ ದೊರಕುತ್ತಿಲ್ಲ. ಕುಡಿಯುವ ನೀರಿಗಾಗಿ ಭಿಕ್ಷೆ ಬೇಡುವಂತಹ ಸ್ಥಿತಿ ಎದುರಾಗಿದೆ. ರಾಷ್ಟ್ರೀಯ ಪಕ್ಷಗಳು ಕೇವಲ ಮತಬ್ಯಾಂಕ್ ರಾಜಕೀಯ ಮಾಡುವುದರಲ್ಲಿಯೇ ಕಾಲ ಕಳೆಯುತ್ತಿವೆ ಎಂದು ಕಿಡಿಕಾರಿದರು.
 
ದೇಶದ ಇತರ ರಾಜ್ಯಗಳಲ್ಲಿ ಪ್ರಾದೇಶಿಕ ಪಕ್ಷಗಳು ರಾಜ್ಯಗಳ ಹಿತಕ್ಕಾಗಿ ಶ್ರಮಿಸುತ್ತಿವೆ. ಆದ್ದರಿಂದ, ಜೆಡಿಎಸ್ ಪಕ್ಷವನ್ನು ಅಧಿಕಾರಕ್ಕೆ ತಂದು ರಾಜ್ಯದ ಹಿತಾಸಕ್ತಿ ರಕ್ಷಿಸುವುದು ಅಗತ್ಯವಾಗಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

Share this Story:

Follow Webdunia kannada

ಮುಂದಿನ ಸುದ್ದಿ

72 ಗಂಟೆಗಳ ಕಾಲ ಹಳೆಯ ನೋಟು ಸ್ವೀಕಾರ ಅವಧಿ ಹೆಚ್ಚಿಸಿದ ಕೇಂದ್ರ ಸರಕಾರ