Webdunia - Bharat's app for daily news and videos

Install App

ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದಲ್ಲಿ ನಿಭಾಯಿಸುವೆ: ಕೆ.ಎಚ್.ಮುನಿಯಪ್ಪ

Webdunia
ಸೋಮವಾರ, 17 ಏಪ್ರಿಲ್ 2017 (15:45 IST)
ನನಗೆ ಪಕ್ಷದಲ್ಲಿ ಕೆಲಸ ಮಾಡಿದ ಅನುಭವವಿದೆ. ಎಲ್ಲಾ ಜಾತಿಯವರನ್ನು ಕೂಡಿಸಿಕೊಂಡು ಹೋಗುವುದರಿಂದ ಈ ಎರಡು ಆಧಾರಗಳ ಮೇಲೆ ನನಗೆ ಕೆಪಿಸಿಸಿ ಅಧ್ಯಕ್ಷರಾಗಲು ಅವಕಾಶ ಕೊಡಿ ಎಂದು ಹೈಕಮಾಂಡ್‌ಗೆ ಮನವಿ ಮಾಡುತ್ತೇನೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಡಿ ಎಂದು ದೆಹಲಿಗೆ ಹೋಗುವುದಿಲ್ಲ. ಅವಕಾಶ ಕೊಟ್ಟರೆ ಯಶಸ್ವಿಯಾಗಿ ನಿಭಾಯಿಸುತ್ತೇನೆ ಎನ್ನುವ ವಿಶ್ವಾಸವಿದೆ. ಕೆಪಿಸಿಸಿ ಅಧ್ಯಕ್ಷರಾಗಲು ಪಕ್ಷದಲ್ಲಿ ಸಮರ್ಥ ನಾಯಕರಿದ್ದಾರೆ ಎಂದು ತಿಳಿಸಿದ್ದಾರೆ.
 
ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದರೂ ನನಗೆ ಸಂತೋಷವಾಗುತ್ತದೆ. ಯಾರು ಕೆಪಿಸಿಸಿ ಅಧ್ಯಕ್ಷರಾಗಬೇಕು ಎನ್ನುವುದನ್ನು ಅಂತಿಮವಾಗಿ ಹೈಕಮಾಂಡ್ ತೀರ್ಮಾನಿಸುತ್ತದೆ ಎಂದರು.
 
ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಮುಂದುವರಿದರೂ ಅಭ್ಯಂತರವಿಲ್ಲ. ಕೆಪಿಸಿಸಿ ಅಧ್ಯಕ್ಷರಾಗುವ ಬಯಕೆಯನ್ನು ಬಹಿರಂಗಪಡಿಸಿದ್ದೇನೆ ಎಂದು ಸಂಸದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments