Select Your Language

Notifications

webdunia
webdunia
webdunia
webdunia

ರಾಷ್ಟ್ರಪತಿ ಹುದ್ದೆಗೇರಲು ಆಸಕ್ತಿಯಿಲ್ಲ: ಎಚ್.ಡಿ.ದೇವೇಗೌಡ

ರಾಷ್ಟ್ರಪತಿ ಹುದ್ದೆಗೇರಲು ಆಸಕ್ತಿಯಿಲ್ಲ: ಎಚ್.ಡಿ.ದೇವೇಗೌಡ
ಹೊಳೆನರಸೀಪುರ , ಸೋಮವಾರ, 29 ಮೇ 2017 (13:42 IST)
ರಾಷ್ಟ್ರಪತಿಯಾಗುವುದಕ್ಕೆ ಅನೇಕ ಮುಖಂಡರಿಂದ ಕರೆ ಬಂದಿವೆ.ಆದರೆ ರಾಷ್ಟ್ರಪತಿ ಹುದ್ದೆಗೇರಲು ಆಸಕ್ತಿಯಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ನನ್ನ ಪಕ್ಷವನ್ನು ರಾಜ್ಯದಲ್ಲಿ ಬಲಪಡಿಸಬೇಕು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದು ದೀನ ದಲಿತರ, ಶೋಷಿತರ, ರೈತರ ಏಳಿಗೆಗಾಗಿ ಶ್ರಮಿಸಬೇಕು ಎನ್ನುವುದೇ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
 
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ರಾಷ್ಟ್ರೀಯ ಪಕ್ಷಗಳಿಗೆ ತಮ್ಮದೇ ಆದ ಹಿತಾಸಕ್ತಿಗಳಿರುತ್ತವೆ. ಆದ್ದರಿಂದ ರಾಜ್ಯದ ಏಳಿಗೆ ಸಾಧ್ಯವಿಲ್ಲ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಹಿತಾಸಕ್ತಿ ಕಾಪಾಡಲು ಸಾಧ್ಯ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವತ್ತ ಗಮನಹರಿಸುತ್ತೇನೆ. ಮುಂದಿನ ಬಾರಿ ಜೆಡಿಎಸ್ ಪಕ್ಷ ಅಧಿಕಾರ ಹಿಡಿಯಲಿದೆ ಎನ್ನುವ ವಿಶ್ವಾಸವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಮಣಿಪುರ್ ಸಿಎಂ ಪುತ್ರನಿಗೆ 5 ವರ್ಷ ಜೈಲು ಶಿಕ್ಷೆ