Webdunia - Bharat's app for daily news and videos

Install App

ರಾಷ್ಟ್ರಪತಿ ಹುದ್ದೆಗೇರಲು ಆಸಕ್ತಿಯಿಲ್ಲ: ಎಚ್.ಡಿ.ದೇವೇಗೌಡ

Webdunia
ಸೋಮವಾರ, 29 ಮೇ 2017 (13:42 IST)
ರಾಷ್ಟ್ರಪತಿಯಾಗುವುದಕ್ಕೆ ಅನೇಕ ಮುಖಂಡರಿಂದ ಕರೆ ಬಂದಿವೆ.ಆದರೆ ರಾಷ್ಟ್ರಪತಿ ಹುದ್ದೆಗೇರಲು ಆಸಕ್ತಿಯಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
 
ನನ್ನ ಪಕ್ಷವನ್ನು ರಾಜ್ಯದಲ್ಲಿ ಬಲಪಡಿಸಬೇಕು. ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತಂದು ದೀನ ದಲಿತರ, ಶೋಷಿತರ, ರೈತರ ಏಳಿಗೆಗಾಗಿ ಶ್ರಮಿಸಬೇಕು ಎನ್ನುವುದೇ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.
 
ರಾಷ್ಟ್ರೀಯ ಪಕ್ಷಗಳಿಂದ ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ. ರಾಷ್ಟ್ರೀಯ ಪಕ್ಷಗಳಿಗೆ ತಮ್ಮದೇ ಆದ ಹಿತಾಸಕ್ತಿಗಳಿರುತ್ತವೆ. ಆದ್ದರಿಂದ ರಾಜ್ಯದ ಏಳಿಗೆ ಸಾಧ್ಯವಿಲ್ಲ. ಪ್ರಾದೇಶಿಕ ಪಕ್ಷಗಳಿಂದ ಮಾತ್ರ ರಾಜ್ಯದ ಹಿತಾಸಕ್ತಿ ಕಾಪಾಡಲು ಸಾಧ್ಯ ಎಂದರು.
 
ಮುಂಬರುವ ವಿಧಾನಸಭೆ ಚುನಾವಣೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆ ಮಾಡುವತ್ತ ಗಮನಹರಿಸುತ್ತೇನೆ. ಮುಂದಿನ ಬಾರಿ ಜೆಡಿಎಸ್ ಪಕ್ಷ ಅಧಿಕಾರ ಹಿಡಿಯಲಿದೆ ಎನ್ನುವ ವಿಶ್ವಾಸವಿದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments