Select Your Language

Notifications

webdunia
webdunia
webdunia
webdunia

ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ: ಸತೀಶ್ ಜಾರಕಿಹೊಳಿ

ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ: ಸತೀಶ್ ಜಾರಕಿಹೊಳಿ
ಬೆಳಗಾವಿ , ಸೋಮವಾರ, 8 ಮೇ 2017 (16:46 IST)
ಕಾಂಗ್ರೆಸ್ ತೊರೆಯುವ ಬಗ್ಗೆ ಸದ್ಯಕ್ಕೆ ಯೋಚಿಸಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
 
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭೇಟಿ ಅಕಸ್ಮಿಕವಾಗಿದೆ ಪೂರ್ವನಿಯೋಜಿತ ಭೇಟಿಯಲ್ಲ ಎಂದು ಸ್ಪಷ್ಟಪಡಿಸಿದರು.
 
ನಾಳೆ ಬೆಂಗಳೂರಿಗೆ ತೆರಳುತ್ತಿದ್ದು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ ಕಾಂಗ್ರೆಸ್ ಪಕ್ಷದಲ್ಲಿರುವ ಅಂತರಿಕ ಸಮಸ್ಯೆಗಳ ಬಗ್ಗೆ ಮಾಹಿತಿ ನೀಡುವುದಾಗಿ ತಿಳಿಸಿದ್ದಾರೆ.
 
ಸಹೋದರರೊಂದಿಗಿರುವ ಭಿನ್ನಮತದಿಂದಾಗಿ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ತೊರೆದು ಜೆಡಿಎಸ್ ಪಕ್ಷ ಸೇರಲಿದ್ದಾರೆ ಎನ್ನುವ ವದಂತಿಗಳು ಹರಡಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಸಿದ್ದರಾಮಯ್ಯ ಹೇಳಿಕೆ ನೋವು ತಂದಿದೆ: ಈಶ್ವರಪ್ಪ