Select Your Language

Notifications

webdunia
webdunia
webdunia
webdunia

ಮಂತ್ರಿಗಿರಿ ಜತೆ ಶಾಸಕ ಸ್ಥಾನಕ್ಕೂ ರಾಜೀನಾಮೆಗೆ ಅಂಬರೀಶ್ ಚಿಂತನೆ

ಅಂಬರೀಶ್
ಬೆಂಗಳೂರು , ಶನಿವಾರ, 18 ಜೂನ್ 2016 (17:19 IST)
ಸಂಪುಟ ಪುನಾರಚನೆಯಲ್ಲಿ ತಮ್ಮ ಹೆಸರು ಕೈಬಿಡುತ್ತಿರುವುದು ಖಚಿತವಾಗುತ್ತಿದ್ದಂತೆ ತೀವ್ರವಾಗಿ ಅಸಮಾದಾನಗೊಂಡ ಸಚಿವ ಅಂಬರೀಶ್,  ಮಂತ್ರಿಗಿರಿ ಜತೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಚಿಂತನೆ ನಡೆಸಿದ್ದಾರೆ ಎಂದು ಅಂಬಿ ಆತ್ಮಿಯ ಮೂಲಗಳು ತಿಳಿಸಿವೆ.
 
ಹಿತೈಷಿಗಳು ಮತ್ತು ಬೆಂಬಲಿಗರೊಂದಿಗೆ ಚರ್ಚೆ ನಡೆಸುತ್ತಿರುವ ಅಂಬರೀಶ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ನಗರಕ್ಕೆ ಬರುವುದನ್ನು ಕಾಯುತ್ತಿದ್ದು, ನಗರಕ್ಕೆ ಬಂದಕೂಡಲೇ ಅವರೊಂದಿಗೆ ಚರ್ಚಿಸಿ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
 
ಯಾವ ಕಾರಣಕ್ಕಾಗಿ ಸಚಿವ ಸ್ಥಾನದಿಂದ ತೆಗೆದಿದ್ದಾರೆ ಎನ್ನುವುದು ಗೊತ್ತಿಲ್ಲ. ವಸತಿ ಸಚಿವನಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದೇನೆ. ಭ್ರಷ್ಟಾಚಾರವಾಗಲಿ ಅಥವಾ ಯಾವುದೇ ಹಗರಣಗಳಾಗಲಿ ನಡೆಸಿಲ್ಲ. ಯಾವ ಮಾನದಂಡದ ಮೇಲೆ ನನ್ನನ್ನು ಸಚಿವ ಸಂಪುಟದಿಂದ ತೆಗೆಯುತ್ತೀರಿ ಎಂದು ತಿರುಗೇಟು ನೀಡಿದ್ದಾರೆ.
 
ಅಂಬರೀಶ್‌ಗೆ ಸಚಿವ ಸಂಪುಟದಿಂದ ಕೈಬಿಟ್ಟಿದ್ದಾರೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯಾದ್ಯಂತ ವಿವಿಧ ಸ್ಥಳಗಳಲ್ಲಿ ಪ್ರತಿಭಟನೆಯ ಕಾವು ಹೆಚ್ಚಾಗತೊಡಗಿದೆ. ಅಂಬರೀಶ್‌ಗೆ ಸಂಪುಟದಿಂದ ಕೈಬಿಟ್ಟರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದ್ದಾರೆ.   
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗ್ರೆಸ್ ಮುಕ್ತ ಭಾರತ ಪರಿಕಲ್ಪನೆ ರಾಹುಲ್ ಗಾಂಧಿಯಿಂದ ವಾಸ್ತವ: ಬಿಜೆಪಿ