ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ್ತು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹುಮನಾಬಾದ್ ಶಾಸಕ ರಾಜಶೇಖರ್ ಪಾಟೀಲ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ಶಾಸಕನಾಗಿದ್ದರೂ ಕೂಡಾ ನನಗೆ ಸಚಿವ ಸ್ಥಾನ ನೀಡದೆ ವಂಚಿಸಲಾಗಿದೆ. ಹುಮನಬಾದ್ ಕ್ಷೇತ್ರಕ್ಕೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಅವಮಾನವಾಗಿದೆ ಎಂದು ಅಸಮಾದಾನ ವ್ಯಕ್ತಪಡಿಸಿದರು.
ಬೀದರ್ ಕ್ಷೇತ್ರಕ್ಕೆ ಧಱಂಸಿಂಗ್ ಮಾಡಿದ ಸಾಧನೆಯಾದರೂ ಏನು ಎಂದು ಪ್ರಶ್ನಿಸಿದ ಅವರು, ಯಾವ ಸಾಧನೆ ಮಾಡಿದ್ದಾರೆ ಎನ್ನುವುದನ್ನು ಉತ್ತರಿಸಲಿ ಎಂದು ಸವಾಲ್ ಹಾಕಿದರು.
ಶಾಸಕ ರಾಜಶೇಖರ್ ಪಾಟೀಲ್ ಅವರಿಗೆ ಸಚಿವ ಸ್ಥಾನ ನೀಡದಿರುವುದನ್ನು ವಿರೋಧಿಸಿ ಅವರ ಬೆಂಬಲಿಗರು ಹುಮನಾಬಾದ್ ಬಂದ್ಗೆ ಕರೆ ನೀಡಿ ರ್ಯಾಲಿಗಳನ್ನು ಹಮ್ಮಿಕೊಂಡಿದ್ದಾರೆ.
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ