Webdunia - Bharat's app for daily news and videos

Install App

ನಾನು ರೈತರ ಸಾಲ ಮನ್ನಾ ಮಾಡೋಕೆ ರೆಡಿ: ಸಿಎಂ ಸಿದ್ದರಾಮಯ್ಯ

Webdunia
ಗುರುವಾರ, 20 ಏಪ್ರಿಲ್ 2017 (17:37 IST)
ನಾನು ರೈತರ ಸಾಲ ಮನ್ನಾ ಮಾಡೋಕೆ ರೆಡಿಯಾಗಿದ್ದೇನೆ. ಆದರೆ, ಕೇಂದ್ರ ಸರಕಾರ ಮುಂದೆ ಬರುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿಷಾದಿಸಿದರು. 
 
ಜಿಲ್ಲೆಯ ಮಳವಳ್ಳಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನ್ಯಾಷನಲ್ ಬ್ಯಾಂಕ್‌ಗಳಿಂದ ರೈತರಿಗೆ 42 ಸಾವಿರ ಕೋಟಿ ರೂಪಾಯಿ ಸಾಲ ನೀಡಲಾಗಿದೆ. ಸಹಕಾರಿ ಬ್ಯಾಂಕ್‌ಗಳಿಂದ ಕೇವಲ ಶೇ. 22 ರಷ್ಟು ರೈತರಿಗೆ ಸಾಲ ನೀಡಲಾಗಿದೆ ಎಂದರು.
 
ನಾನು ಖುದ್ದಾಗಿ ಪ್ರಧಾನಿ ಮೋದಿಯವರ ಬಳಿ ತೆರಳಿ, ರಾಷ್ಟ್ರೀಕೃತ ಬ್ಯಾಂಕ್‌ಗಳ ರೈತರ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದ್ದೆ. ಆದರೆ, ಮೋದಿ ಜಪ್ಪಯ್ಯ ಎಂದಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
 
ಬ್ಯಾಂಕ್‌ಗಳಿಗೆ ವಾರ್ನಿಂಗ್ ನೀಡಿದ ಸಿಎಂ ಸಿದ್ದರಾಮಯ್ಯ, ಮಳೆ, ಬೆಳೆಯಾಗುವವರೆಗೆ ರೈತರ ಸಾಲ ವಸೂಲಿ ಮಾಡುವುದಾಗಲಿ ಅಥವಾ ನೋಟಿಸ್ ಕೊಡುವುದಾಗಲಿ ಮಾಡುವಂತಿಲ್ಲ ಎಂದು ಎಚ್ಚರಿಕೆ ನೀಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ರಾಜ್ಯದಲ್ಲಿ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ಟಿವಿ ಕಾರ್ಯಕ್ರಮಗಳಲ್ಲಿ ಸೈರನ್ ಮೊಳಗಿಸದಂತೆ ಕೇಂದ್ರ ಸರ್ಕಾರ ನಿರ್ಬಂಧ

Operation Sindoor: ಬೆಟ್ಟಿಂಗ್ ವೇಳೆ ಪಾಕಿಸ್ತಾನ ಪರ ಕೂಗಿದವ ಅರೆಸ್ಟ್‌, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments