Webdunia - Bharat's app for daily news and videos

Install App

ಇಬ್ರಾಹಿಂಗೆ ಮರ್ಯಾದೆ ಇಲ್ಲ: ಸಿದ್ದರಾಮಯ್ಯ

Webdunia
ಸೋಮವಾರ, 6 ಜೂನ್ 2022 (14:13 IST)
ಮೈಸೂರು : ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಿಡಿಕಾರಿದ್ದಾರೆ.

ರಾಜ್ಯಸಭೆ ಚುನಾವಣೆಯಲ್ಲಿ ಬಿಎಸ್ವೈ ಸಿದ್ದು ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಸಿಎಂ ಇಬ್ರಾಹಿಂ ಆರೋಪಿಸಿದ್ದರು. ಈ ವಿಚಾರವಾಗಿ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ಸಿಎಂ ಇಬ್ರಾಹಿಂಗೆ ಮಾನ ಮರ್ಯಾದೆ ಇಲ್ಲ.

ಅವನು ಜೆಡಿಎಸ್ನಲ್ಲಿ ಕ್ಯಾಪ್ಟೀವ್ ಪ್ರೆಸಿಡೆಂಟ್ ಇದ್ದಂತೆ. ಕುಳಿತುಕೋ ಎಂದರೆ ಕುಳಿತುಕೊಳ್ಳಬೇಕು. ನಿಂತುಕೋ ಅಂದರೆ ನಿಂತುಕೊಳ್ಳಬೇಕು. ಎಂಎಲ್ಸಿ ಮಾಡುತ್ತೇವೆ ಅಂತ ಹೇಳಿ ಕರೆದುಕೊಂಡು ಹೋದರು.
ಎಂಎಲ್ಸಿ ಮಾಡಿದ್ದಾರಾ? ಏನೋ ಒಂದು ಹುದ್ದೆ ಕೊಟ್ಟಿದ್ದಾರೆ ಅಂತ ಬಾಯಿಗೆ ಬಂದಂತೆ ಮಾತನಾಡುತ್ತಾನೆ ಲೇವಡಿ ಮಾಡಿದ್ದಾರೆ.
ರಾಜ್ಯಸಭಾ ಚುನಾವಣೆ ವಿಚಾರವಾಗಿ ಮಾತನಾಡಿದ ಅವರು, ನಮ್ಮ ಗೆಲುವಿಗೆ ಎಷ್ಟು ಮತ ಬೇಕೋ ಅಷ್ಟು ಆತ್ಮಸಾಕ್ಷಿಯ ಮತಗಳು ಜೆಡಿಎಸ್, ಬಿಜೆಪಿಯಿಂದ ಕಾಂಗ್ರೆಸ್ಗೆ ಬಂದೇ ಬರುತ್ತದೆ. ಜೆಡಿಎಸ್ಗೆ ಈಗಲೂ ಬಿಜೆಪಿ ಗೆಲ್ಲಬಾರದು ಎಂಬ ಇಚ್ಛೆ ಇದ್ದರೆ ಅವರ ಅಭ್ಯರ್ಥಿಯನ್ನು ಕಣದಿಂದ ನಿವೃತ್ತಿ ಮಾಡಿಸಲಿ.

ನಾವು ಅನೇಕ ಬಾರಿ ಜೆಡಿಎಸ್ಗೆ ನೆರವಾಗಿಲ್ಲವಾ? ದೇವೇಗೌಡರನ್ನು ರಾಜ್ಯಸಭೆಗೆ ಕಳುಹಿಸುವಾಗ ನಾವು ಬೆಂಬಲಿಸಲಿಲ್ಲವಾ? ಮೂವತ್ತೇಳು ಸ್ಥಾನ ಇದ್ದ ಜೆಡಿಎಸ್ಗೆ ನಾವು ಸಿಎಂ ಸ್ಥಾನ ಕೊಡಲಿಲ್ಲವಾ? ಹೀಗೆ ಹಲವು ಬಾರಿ ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ನಾವು ಜೆಡಿಎಸ್ಗೆ ಸಹಕಾರ ಕೊಟ್ಟಿದ್ದೇವೆ.

ಈಗ ಅಲ್ಪಸಂಖ್ಯಾತರೊಬ್ಬರು ಗೆಲ್ಲಲು ಜೆಡಿಎಸ್ ತನ್ನ ಅಭ್ಯರ್ಥಿಯ ನಿವೃತ್ತಿ ಘೋಷಿಸಲಿ. ಪ್ರತಿ ಬಾರಿಯೂ ಜೆಡಿಎಸ್ ಯಾಕೆ ಗೆಲ್ಲಬೇಕು ಎಂದು ಪ್ರಶ್ನಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಕ್ಷಿಣ ಕನ್ನಡದಲ್ಲಿ 20 ನಕಲಿ ವೈದ್ಯರ ವಿರುದ್ಧ ಕೇಸ್‌, ಕ್ಲಿನಿಕ್‌ಗೆ ಬೀಗ

ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಬಿಗ್ ಶಾಕ್

ಎಂಥ ಪರಿಸ್ಥಿತಿಯಲ್ಲಿ ಕೂಡ ನಮ್ಮ ತಾಳ್ಮೆಯನ್ನು ಪರೀಕ್ಷೆ ಮಾಡೋಕೆ ಹೋಗಬೇಡಿ, Video

40ವರ್ಷದಿಂದ ಕಾಂಗ್ರೆಸ್‌ಗೆ ಮತ ಹಾಕಿದವರಿಗೆ ಶಿವಕುಮಾರ್‌ ಯಾರೆಂಬುದೇ ಗೊತ್ತಿಲ್ಲ: ಬಿಜೆಪಿ ಲೇವಡಿ

ಅಂಗಡಿ ಮುಂದೆ ಚಾಕಲೇಲ್‌ಗೆಂದು ನಿಂತಿದ್ದ ಇಬ್ಬರು ಮಕ್ಕಳು: ಟ್ರ್ಯಾಕ್ಟರ್ ಚಾಲಕನ ನಿರ್ಲ್ಯಕ್ಷಕ್ಕೆ ಪ್ರಾಣವೇ ಹೋಯ್ತು

ಮುಂದಿನ ಸುದ್ದಿ
Show comments