Webdunia - Bharat's app for daily news and videos

Install App

ಬಾದಾಮಿ ಐಟಿ ದಾಳಿ ಪ್ರಕರಣ ಹಿನ್ನೆಲೆ ಸಿಎಂ ಇಬ್ರಾಹಿಂ ಟಾಂಗ್

Webdunia
ಮಂಗಳವಾರ, 8 ಮೇ 2018 (17:24 IST)
ಬಾದಾಮಿ: ತಡರಾತ್ರಿ ಕೃಷ್ಣಾ ರೆಸಾರ್ಟ್ ಮೇಲೆ ಐಟಿ ದಾಳಿ ನಡೆಸಿ ಗುಡ್ಡ ಅಗೆದು ಇಲಿ ಹಿಡಿದಿದ್ದಾರೆ. ಐಟಿ ಅಧಿಕಾರಿಗಳಿಗೆ ಸಿಎಂ ಇಬ್ರಾಹಿಂ ಬಿಟ್ಟು ಬೇರೇನೂ ಸಿಕ್ಕಿಲ್ಲ ನನ್ನ ನೋಡಿದ್ರು, ನಿಮ್ಮ ಭಾಷಣ ಚೆನ್ನಾಗಿದೆ ಎಂದು ವಾಪಸ್ ಹೋಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಸಿಎಂ ಇಬ್ರಾಹಿಂ ಟಾಂಗ್ ನೀಡಿದ್ದಾರೆ. 
ಬದಾಮಿಯಲ್ಲಿ ಹಣ ಖರ್ಚು ಮಾಡಿ ಸಿಎಂ ಗೆಲ್ಲುವ ಪರಿಸ್ಥಿತಿ ಇಲ್ಲ. ಇಲ್ಲಿಯ ಜನರೇ ಹಣ ಖರ್ಚು ಮಾಡಿ ಸಿಎಂ ಅವರನ್ನಗೆಲ್ಲಿಸ್ತಾರೆ..
 
ಪಾರಸ್ ಮಲ್ ಖರ್ಚಿಗೆ ತಂದಿರೋ ಹಣ ತೆಗೆದುಕೊಂಡು ಹೋಗಿದ್ದಾರೆ. ಪಾಪ ನಾಸ್ಟಾಕ್ಕೆ ಹಣ ಇಲ್ಲದಂತೆ ಕುಂತಿದ್ದಾನೆ. ರಾಜಕೀಯ ಪ್ರೇರಿತ ದಾಳಿ ಅಲ್ಲದೇ ಇನ್ನೇನು? ಐಟಿ ಅಧಿಕಾರಿಗಳು ನಮ್ಮ ಬೀಗರಲ್ಲ, ನಮ್ಮ ಜೊತೆಗೆ ಬೀಗಸ್ತನ ಮಾಡೋದಕ್ಕೆ ಬಂದಿರಲಿಲ್ಲ.ಅವರು ಬಂದಿದ್ದೇ ನಮ್ಮನ್ನ ಹೆದರಿಸೋಕೆ ಎಂದು ಗುಡುಗಿದರು.
 
ಏನೋ ಸಿಗುತ್ತೆ ಅಂತ ಉದಾಸೆ ಇಟಗೊಂಡು ಬಂದಿದ್ರು ನಮ್ಮ ಹತ್ರ ಏನು ಸಿಗಬೇಕು? ನಾವು ಅಕ್ಷಯ ಪಾತ್ರೆಯಲ್ಲಿ ಬಿಕ್ಷೆ ಬೇಡುವ ಜನ ಬಿಜೆಪಿಯರ ಮೇಲೆ ಐಟಿ ದಾಳಿ ಆಗಲ್ಲ, ಯಾಕೆಂದರೆ ಕೇಂದ್ರದಲ್ಲಿ ಸರಕಾರ ಅವರದ್ದೇ ಇದೆ ಬಿಜೆಪಿಯವರು ದುಡ್ಡು ಹಂಚುವ ಕೆಲಸ ಮಾಡ್ತಾರೆ, ಅದನ್ನ ಜನರೇ ತಡೆಯಬೇಕು, ನಮ್ಮಿಂದಾಗಲ್ಲ ಎಂದು ಬದಾಮಿಯ ಕೋರ್ಟ್ ಹೊಟೆಲ್ ನಲ್ಲಿ ಸಿಎಂ ಇಬ್ರಾಹಿಂ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments