Webdunia - Bharat's app for daily news and videos

Install App

ವಿಗ್ರಹ ಕಳ್ಳತನ-6 ಮಂದಿ ಬಂಧನ

Webdunia
ಶನಿವಾರ, 26 ಆಗಸ್ಟ್ 2023 (18:25 IST)
ಬೆಲೆ ಬಾಳುವ ಕಲ್ಲಿನ ವಿಗ್ರಹ ಕಳ್ಳತನಕ್ಕೆ 6 ಮಂದಿ ಯತ್ನಿಸಿದ್ದು ಪೊಲೀಸರು ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರು ಬೆಂಗಳೂರು ಹೆದ್ದಾರಿಯ ನಾಗನಹಳ್ಳಿ ಗೇಟ್ ಬಳಿ ನಡೆದಿದೆ. ಮೈಸೂರು ಮೇಟಗಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ, 2 ಲಕ್ಷ ರೂಪಾಯಿ ಮೌಲ್ಯದ ಒಂದು ಜೊತೆ ಕಲ್ಲಿನ ಆನೆ ವಿಗ್ರಹವನ್ನು ವಶಕ್ಕೆ ಪಡೆದಿದ್ದಾರೆ. ಮೈಸೂರಿನ ಗೋಕುಲಂ 3ನೇ ಹಂತದ ನಿವಾಸಿ ಮನೋಜ್, ಕೆ.ಸಚಿನ್, ನಾಗನಹಳ್ಳಿ ನಿವಾಸಿ ಎನ್. ಸಂತೋಷ್ ಕುಮಾರ್, ನಂಜನಗೂಡಿನ ಚಂದ್ರಶೇಖರ ಮೂರ್ತಿ, ಮೆಲ್ಲಹಳ್ಳಿ ಗ್ರಾಮದ ಗೋಪಾಲ್, ಭುಗತಗಳ್ಳಿ ನಿವಾಸಿ ನಾಗೇಶ ಬಂಧಿತ ಆರೋಪಿಗಳಾಗಿದ್ದಾರೆ. ಇವರು ಕಸ್ತೂರಿ ನಿವಾಸ ಹೋಟೆಲ್ ಪಕ್ಕದ ಕಲ್ಲಿನ ವಿಗ್ರಹ ತಯಾರಿಸುವ ಕಾರ್ಯಾಗಾರದಿಂದ ಸಾಗಿಸಲು ಯತ್ನಿಸಿದ್ದಾರೆ. ಟಾಟಾ ಜೀಪ್ ವಾಹನಲ್ಲಿ ತೆಗೆದುಕೊಂಡು ಹೋಗಲು ಯತ್ನಿಸಿದಾಗ ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments