Select Your Language

Notifications

webdunia
webdunia
webdunia
webdunia

ಅಂಬರೀಶ್ ಜೆಡಿಎಸ್‌ಗೆ ಬಂದ್ರೆ ಸ್ವಾಗತ: ಸಂಸದ ಪುಟ್ಟರಾಜು

ಅಂಬರೀಶ್
ಮಂಡ್ಯ , ಶುಕ್ರವಾರ, 17 ಜೂನ್ 2016 (19:12 IST)
ವಸತಿ ಖಾತೆ ಸಚಿವ ಅಂಬರೀಶ್‌ಗೆ ಸಚಿವ ಸ್ಥಾನದಿಂದ ಕೊಕ್ ನೀಡಲಾಗಿದೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಅಂಬರೀಶ್ ಜೆಡಿಎಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಮಂಡ್ಯ ಸಂಸದ ಪುಟ್ಟರಾಜು ಹೇಳಿದ್ದಾರೆ.
 
ಸಂಪುಟ ಪುನಾರಚನೆಯಲ್ಲಿ ತಮ್ಮನ್ನು ಕೈಬಿಡಲಾಗಿದೆ ಎಂದು ವಸತಿ ಸಚಿವ ಅಂಬರೀಶ್ ಹೇಳಿಕೆ ನೀಡಿದ ನಂತರ ಅವರನ್ನು ಜೆಡಿಎಸ್ ಪಕ್ಷಕ್ಕೆ ಸೆಳೆದುಕೊಳ್ಳುವ ಭಾರಿ ಪ್ರಯತ್ನ ಜೆಡಿಎಸ್ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
 
ಸಚಿವರನ್ನಾಗಿ ಮಾಡಿದವರು ಆವರೇ, ಸಚಿವ ಸ್ಥಾನದಿಂದ ಕೈಬಿಡುವವರು ಅವರೇ. ಸಂಪುಟದಿಂದ ಕೈಬಿಟ್ಟರೂ, ಬಿಡದಿದ್ದರೂ ಸಂತೋಷ ಎಂದು ವಸತಿ ಖಾತೆ ಸಚಿವ ಅಂಬರೀಶ್ ತಿಳಿಸಿದ್ದಾರೆ.   
 
ಯಾರನ್ನಾದರೂ ಶಿಕ್ಷಿಸಬೇಕು ಎಂದರೆ ಅವರು ತಪ್ಪು ಮಾಡಿರಬೇಕು. ತಪ್ಪು ಮಾಡಿದಾಗ ಶಿಕ್ಷಿಸಬೇಕು. ನನ್ನಲ್ಲಿ ಪಿನ್ ಪಾಯಿಂಟ್ ತಪ್ಪು ಕಂಡುಹಿಡಿಯಲು ಆಗುವುದಿಲ್ಲ. ಸಚಿವನಾಗಿ ಮೂರು ವರ್ಷದ ಸಾಧನೆಯನ್ನು ಜನತೆ ಹೇಳಬೇಕಾಗಿದೆ. ನಾನೇ ಹೇಳುವುದು ಸಾಧನೆಯಾಗುವುದಿಲ್ಲ ಎಂದು ತಿರುಗೇಟು ನೀಡಿದ್ದಾರೆ. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸಂಪುಟ ಪುನಾರಚನೆಯ ಬಗ್ಗೆ ತಲೆಕೆಡಿಸಿಕೊಂಡಿಲ್ಲ: ಆರ್‌.ವಿ.ದೇಶಪಾಂಡೆ