Select Your Language

Notifications

webdunia
webdunia
webdunia
webdunia

ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ : ಬಸವರಾಜ್ ಬೊಮ್ಮಾಯಿ

ಬಜರಂಗದಳದವರು ಸಿಡಿದು ನಿಂತ್ರೆ ಬೇರು ಸಮೇತ ಕಿತ್ತೋಗ್ತೀರಿ : ಬಸವರಾಜ್ ಬೊಮ್ಮಾಯಿ
ಧಾರವಾಡ , ಬುಧವಾರ, 3 ಮೇ 2023 (08:54 IST)
ಧಾರವಾಡ : ಬಜರಂಗದಳದವರು ನಮ್ಮ ಹನುಮನ ಭಕ್ತರು. ಒಬ್ಬೊಬ್ಬರು ಸಿಡಿದು ನಿಂತರೆ ಬೇರು ಸಮೇತ ಕಿತ್ತು ಹೋಗುತ್ತೀರಿ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
 
ಧಾರವಾಡ ಜಿಲ್ಲೆಯ ನವಲಗುಂದ ಪಟ್ಟಣದಲ್ಲಿ ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಪರ ಭರ್ಜರಿ ರೋಡ್ ಶೋ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ನವಲಗುಂದಕ್ಕೆ ಇದು ಬಂಡಾಯ ನಾಡು ಎಂದು ಕರೆದರು.

ಈ ಭಾಗದಲ್ಲಿ ಮಹದಾಯಿ ನೀರು ಬಂದಿರಲಿಲ್ಲ, ರೈತರ ಮೇಲೆ ಗುಂಡು ಹಾಕಿದ ಸರ್ಕಾರ ಕಾಂಗ್ರೆಸ್ ಎಂದು ಟೀಕಿಸಿದ ಅವರು, ಮಹದಾಯಿ ನೀರನ್ನು ಮಲಪ್ರಭೆಗೆ ತಂದು ನೀರು ಕೊಡಲು ಅಡ್ಡ ಹಾಕಿದ್ದ ಕಾಂಗ್ರೆಸ್, ಸೋನಿಯಾ ಗಾಂಧಿ ಅವರು ಗೋವಾದಲ್ಲಿ ಹೋಗಿ ಹನಿ ನೀರು ಕೊಡಲ್ಲ ಎಂದಿದ್ರು ಎಂದರು.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರಲ್ಲಿ ಮತ್ತೆ ನರೇಂದ್ರ ಮೋದಿ ಕ್ಯಾಂಪೇನ್