Webdunia - Bharat's app for daily news and videos

Install App

ಬಿಜೆಪಿ ಅಧಿಕಾರಕ್ಕೆ ಬಂದ್ರೆ ತಾನೇ ಬಿಎಸ್‌ವೈ ಸಿಎಂ ಆಗೋದು

Webdunia
ಶನಿವಾರ, 27 ಮೇ 2017 (16:04 IST)
ಬಿಜೆಪಿ ಪಕ್ಷ ರಾಜ್ಯದಲ್ಲಿ ಅಧಿಕಾರಕ್ಕೆ ಬರೋದಿಲ್ಲ. ಬಿಜೆಪಿ ಅಧಿಕಾರಕ್ಕೆ ಬಂದ್ರೆ ತಾನೇ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಲೇವಡಿ ಮಾಡಿದ್ದಾರೆ. 
 
ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ತುಂಬುಗಾನಹಳ್ಳಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು,  ಬಿಜೆಪಿ ಹೈಕಮಾಂಡ್‌ನದ್ದು ಇಬ್ಬಗೆ ನೀತಿ. 75 ವರ್ಷ ಆದವರಿಗೆ ಅಧಿಕಾರವಿಲ್ಲ ಎಂದಿತ್ತು. ಇದೀಗ 75 ವರ್ಷದ ಯಡಿಯೂರಪ್ಪನವರೇ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳುತ್ತಿರುವುದಾಗಿ ಟೀಕಿಸಿದರು. 
 
ಮಾರ್ಚ್ 29 ಮತ್ತು 30 ರಂದು ಕಾಂಗ್ರೆಸ್ ಪಕ್ಷದ ನಾಯಕರ ಸಭೆ ನಡೆಯಲಿದ್ದು, ಮುಂಬರುವ ಚುನಾವಣೆ ಬಗ್ಗೆ ರಣತಂತ್ರ ರೂಪಿಸಲಾಗುವುದು. ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ ಎಂದರು.  
 
ಗೋಹತ್ಯೆ ನಿಷೇಧ ಕಾನೂನು ಕುರಿತಂತೆ ಸುದೀರ್ಘವಾಗಿ ಚರ್ಚಿಸಿ ಜಾರಿಗೆ ತರುತ್ತೇವೆ. ಕೇಂದ್ರ ಸರಕಾರದ ಆದೇಶ ಇನ್ನೂ ನಮಗೆ ಬಂದಿಲ್ಲ ಎಂದು ತಿಳಿಸಿದ್ದಾರೆ. 
 
3 ವರ್ಷದ ಅವಧಿಯಲ್ಲಿ ಎನ್‌ಡಿಎ ಸರಕಾರದ ಸಾಧನೆ ಶೂನ್ಯ, ಆತ್ಮಹತ್ಯೆಗೆ ಶರಣಾದ ರೈತರಿಗೆ ನಯಾ ಪೈಸೆ ಪರಿಹಾರ ನೀಡಲಿಲ್ಲ. ಮರಳು ಮಾಫಿಯಾದಂತಹ ಬೆದರಿಕೆಗಳಿಗೆ ಪೊಲೀಸರು ಮಣಿಯುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments