Select Your Language

Notifications

webdunia
webdunia
webdunia
webdunia

ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದರೆ ನಾವೂ ರಿವರ್ಸ್ ಆಪರೇಷನ್ ಮಾಡುತ್ತೇವೆ- ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ

ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದರೆ ನಾವೂ ರಿವರ್ಸ್ ಆಪರೇಷನ್ ಮಾಡುತ್ತೇವೆ- ಸಚಿವ ಸತೀಶ್ ಜಾರಕಿಹೊಳಿ ಎಚ್ಚರಿಕೆ
ಬೆಂಗಳೂರು , ಸೋಮವಾರ, 1 ಜುಲೈ 2019 (13:51 IST)
ಬೆಂಗಳೂರು : ಕಾಂಗ್ರೆಸ್ ಶಾಸಕ ಆನಂದ್ ಸಿಂಗ್, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹಿನ್ನಲೆ ಮೈತ್ರಿ ಸರ್ಕಾರ ಉರುಳಬಹುದು ಎಂಬ ಶಂಕೆ ವ್ಯಕ್ತವಾದರೆ, ಸಚಿವ ಸತೀಶ್ ಜಾರಕಿಹೊಳಿ ಮಾತ್ರ  ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.




ಬೆಳಗಾವಿಯಲ್ಲಿ ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಜಿಂದಾಲ್ ವಿಚಾರಕ್ಕೆ ಸಂಬಂಧಪಟ್ಟಂತೆ ಆನಂದ್ ಸಿಂಗ್ ರಾಜೀನಾಮೆ ನೀಡಿರಬಹುದು. ಒಂದೊಮ್ಮೆ ಬಿಜೆಪಿ 'ಆಪರೇಷನ್ ಕಮಲ'ಕ್ಕೆ ಕೈ ಹಾಕಿದರೆ ನಾವೂ ಕೂಡ ರಿವರ್ಸ್ ಆಪರೇಷನ್ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.


ಅಲ್ಲದೆ ಅಥಣಿ ಕ್ಷೇತ್ರದ ಶಾಸಕ ಮಹೇಶ್ ಕುಮಟಳ್ಳಿ ಕೂಡಾ ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ಕೇಳಿ ಬಂದ ಹಿನ್ನಲೆಯಲ್ಲಿ  ನಿಂತ ಸ್ಥಳದಲ್ಲಿಯೇ  ಅವರಿಗೆ ದೂರವಾಣಿ ಕರೆ ಮಾಡ, ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ವಿಚಾರ ಮಾಧ್ಯಮದವರಿಗೆ ತಿಳಿಯುವಂತೆ ಮಾಡಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕರ ರಾಜೀನಾಮೆಯ ಹಿಂದಿನ ಮಾಸ್ಟರ್ ಮೈಂಡ್ ನಾನಲ್ಲ- ಹೆಚ್.ವಿಶ್ವನಾಥ್ ಸ್ಪಷ್ಟನೆ