ರಾಜ್ಯದ ಇಬ್ಬರು ಮಂತ್ರಿಗಳು ರಾಜೀನಾಮೆ ನೀಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ. ಬಿಎಸ್ವೈಗೆ ತಾಕತ್ತಿದ್ದರೆ ಆ ಮಂತ್ರಿಗಳ ಹೆಸರು ಬಹಿರಂಗಪಡಿಸಲಿ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಸವಾಲ್ ಎಸೆದಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟದ ಇಬ್ಬರು ಮಂತ್ರಿಗಳು ರಾಜೀನಾಮೆ ನೀಡುತ್ತಾರೆ ಎಂದು ಬಿ.ಎಸ್.ಯಡಿಯೂರಪ್ಪ ಆರೋಪ ಮಾಡಿದ್ದಾರೆ. ಆ ಮಂತ್ರಿಗಳು ಬಿಎಸ್ವೈ ಸಂಬಂಧಿಗಳಾ? ತಾಕತ್ತಿದ್ದರೆ ಅವರ ಹೆಸರುಗಳನ್ನು ಹೆಸರು ಬಹಿರಂಗಪಡಿಸಲಿ. ಹಿಟ್ ಆಂಡ್ ರನ್ ಮಾಡುವುದು ಸರಿಯಲ್ಲ ಎಂದಿದ್ದಾರೆ.
ರಾಜೀನಾಮೆ ನೀಡುವ ಮಂತ್ರಿಗಳ ಹೆಸರನ್ನು ಬಹಿರಂಗ ಪಡಿಸದಿದ್ದರೆ, 201 ಸೆಕ್ಷನ್ ಅಡಿಯಲ್ಲಿ ಬಿಎಸ್ವೈ ಅವರು ಸಹ ಅಪರಾಧಿಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಇದೆ ರೀತಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವರ್ತನೆ ಮುಂದುವರೆದರೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಕಳೆದುಕೊಳ್ಳಲಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಜನಾರ್ದನ ಪೂಜಾರಿ ಕಿಡಿಕಾರಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ