Webdunia - Bharat's app for daily news and videos

Install App

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

Sampriya
ಮಂಗಳವಾರ, 24 ಜೂನ್ 2025 (14:57 IST)
ಬೆಂಗಳೂರು: ಕರ್ನಾಟಕದ ವಸತಿ ಮತ್ತು ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವ ಜಮೀರ್ ಅಹ್ಮದ್ ಖಾನ್ ಅವರು ತಮ್ಮ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರದ ಆರೋಪಗಳನ್ನು ಮಂಗಳವಾರ ತಳ್ಳಿಹಾಕಿದ್ದಾರೆ.

ಅಂತಹ ಆರೋಪಗಳನ್ನು ಮಾಡುವ ಪಕ್ಷದ ಮುಖಂಡರು ಲಂಚ ಪಡೆಯುವ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲಿ. ಅಂತಹ ಭಷ್ಟಾಚಾರ ಕಂಡುಬಂದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದರು.

ಭಷ್ಟಚಾರದಲ್ಲಿ  ನಾನು ಭಾಗಿಯಾಗಿದ್ದರೆ ಅಥವಾ ಎಲ್ಲಿಯಾದರೂ ನನ್ನ ಹೆಸರು ತನಿಖೆಗೆ ಬಂದರೆ, ನಾನು ರಾಜೀನಾಮೆ ನೀಡಲು ಸಿದ್ಧನಿದ್ದೇನೆ ಎಂದರು. 

ಜನರಿಗೆ ಮನೆ ಕೊಡಿಸಲು ಲಂಚ ಪಡೆಯುತ್ತಿರುವ ಅಧಿಕಾರಿಗಳ ಹೆಸರನ್ನು ಬಹಿರಂಗಪಡಿಸಲಿ ಎಂದು ಪಕ್ಷದ ಮುಖಂಡರಾದ ಬಿ.ಆರ್.ಪಾಟೀಲ್ ಮತ್ತು ರಾಜು ಕಾಗೆ ಸವಾಲು ಹಾಕಿದರು. 

ಬಿ.ಆರ್.ಪಾಟೀಲ್ ಅವರು ನನ್ನ ವಿರುದ್ಧ ಆರೋಪ ಮಾಡಿಲ್ಲ, ಆಡಿಯೋ ಸಂಭಾಷಣೆ ಕೇಳಿದ್ದೇನೆ, ಶಾಸಕರು ಮಾಡಿದ ಮನವಿ ಮೇರೆಗೆ ಮನೆ ಮಂಜೂರು ಮಾಡಿದ್ದೇವೆ, ಹಣ ಪಡೆದವರ ಹೆಸರನ್ನು ಬಿ.ಆರ್.ಪಾಟೀಲ್ ಬಹಿರಂಗಪಡಿಸಬೇಕು ಎಂದರು. 

ಜಮೀರ್ ಅಹ್ಮದ್ ಖಾನ್ ಅವರ ನೇತೃತ್ವದ ಇಲಾಖೆಯಲ್ಲಿ ಪ್ರತ್ಯೇಕ ಇಲಾಖಾ ವಿಚಾರಣೆಯನ್ನು ಪ್ರಾರಂಭಿಸಿದಾಗ, ಆರೋಪಗಳ ಬಗ್ಗೆ ಸಿಬಿಐ ತನಿಖೆಗೆ ಸಿದ್ಧ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವ ಇಲಾಖೆ ನೋಡಿದ್ರೂ ಕಮಿಷನ್ ಕಮಿಷನ್ ಕಮಿಷನ್: ಬಿವೈ ವಿಜಯೇಂದ್ರ

ಭಷ್ಟಚಾರ ಸಾಬೀತಾದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತೇನೆ: ಜಮೀರ್ ಅಹ್ಮದ್‌

Viral video: ತನ್ನ ಪಾಡಿಗೆ ತಾನು ಹೋಗುತ್ತಿದ್ದ ಮಹಿಳೆಯ ನಡು ರಸ್ತೆಯಲ್ಲೇ ಎಳೆದಾಡಿದ ಯುವಕರು

‌ತಿರುಮಲ ವೆಂಕಟೇಶ್ವರ ದೇವರ ಭಕ್ತರಿಗೆ ಗುಡ್‌ನ್ಯೂಸ್‌: ಲಡ್ಡುಗಾಗಿ ಇನ್ನೂ ಗಂಟೆಗಟ್ಟಲೆ ಕಾಯಬೇಕಿಲ್ಲ

ಅಮೀರ್ ಖಾನ್ ಭೇಟಿಯಾದ ಸಿಎಂ ಸಿದ್ದರಾಮಯ್ಯ ಸಂವೇದನಾಶೀಲ ನಟ ಎಂದಿದ್ದೇ ತಪ್ಪಾಯ್ತು

ಮುಂದಿನ ಸುದ್ದಿ
Show comments