Webdunia - Bharat's app for daily news and videos

Install App

ರುದ್ರೇಶ್ ಹತ್ಯೆ ಆರೋಪಿಗಳನ್ನು ಬಂಧಿಸದಿದ್ರೆ ಕರ್ನಾಟಕ ಬಂದ್: ಯಡಿಯೂರಪ್ಪ ವಾರ್ನಿಂಗ್

Webdunia
ಬುಧವಾರ, 19 ಅಕ್ಟೋಬರ್ 2016 (14:49 IST)
ಹಾಡುಹಗಲೇ ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವಾರದಲ್ಲಿ ಆರೋಪಿಗಳನ್ನು ಬಂಧಿಸದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ. ಈ ಕುರಿತು ಮುಂದಿನ ವಾರ ದಿನಾಂಕ ನಿಗದಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ.
 
ಲಜ್ಜೆಗೆಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕಿಂಚಿತ್ತೂ ಮಾನ ಮರ್ಯಾದೆ ಇಲ್ಲ. ವಿನಾಶ ಕಾಲೇ ವಿಪರೀತ ಬುದ್ಧಿ ಎಂಬಂತೆ ಸಿಎಂ ವರ್ತಿಸುತ್ತಿದ್ದಾರೆ ಎಂದು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಡೆದ ಒಂಟಿ ಮಹಿಳೆಯರ ಹತ್ಯೆ ಪ್ರಕರಣಗಳನ್ನು ಪಟ್ಟಿ ಮಾಡುತ್ತೇವೆ. ರಾಜ್ಯ ಸರಕಾರ ಕರ್ನಾಟಕ ರಾಜ್ಯವನ್ನು ಕೇರಳ, ಬಿಹಾರ್ ಮಾಡಲು ಹೊರಟಿದೆ. ಇಂತಹ ಕೊಲೆಗಡುಕ ಸರಕಾರ ಅಧಿಕಾರದಲ್ಲಿರಬೇಕಾ ಎಂದು ಪ್ರಶ್ನಿಸಿದರು.
 
ಪೊಲೀಸ್ ಇಲಾಖೆಗೆ ಕರೆ.....
 
ಒಂದೂವರೆ ವರ್ಷದ ಮೇಲೆ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಇರುವುದಿಲ್ಲ. ಆರ್‌ಎಸ್‌ಎಸ್ ಕಾರ್ಯಕರ್ತ ರುದ್ರೇಶ್ ಕೊಲೆ ಪ್ರಕರಣದ ಆರೋಪಿಗಳನ್ನು ಒಂದು ವಾರದಲ್ಲಿಯೇ ಬಂಧಿಸಿ. ನಿಮ್ಮ ಜೊತೆ ನಾವಿದ್ದೇವೆ ಎಂದು ಬಿಎಸ್‌ವೈ ಪೊಲೀಸ್ ಇಲಾಖೆಗೆ ಕರೆ ನೀಡಿದ್ದಾರೆ. 
 
 
ಸಿಎಂ ಕೈಬಿಸಿ ಮಾಡಿದ್ರೆ ಮಂತ್ರಿಗಿರಿ........
 
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ಹೇಳಿಕೆಯಂತೆ, ಸಿಎಂ ಸಿದ್ದರಾಮಯ್ಯ ಕೈಬಿಸಿ ಮಾಡುವವರಿಗೆ ಮಾತ್ರ ಮಂತ್ರಿಗಿರಿ ಎನ್ನುವುದು ಸಾಬೀತಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವ್ಯಂಗ್ಯವಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹಂತಕಿ ಸೋನಂ ರಘುವಂಶಿಯ ಮತ್ತೊಂದು ಸೀಕ್ರೆಟ್ ಬಯಲು

ನಾನೇನು ಮಾಡ್ತೀನಿ ಎಂದು ಯಾರಿಗೂ ಗೊತ್ತಿಲ್ಲ: ಇರಾನ್ ಗೆ ಡೊನಾಲ್ಡ್ ಟ್ರಂಪ್ ವಾರ್ನ್

ನಾನೇನು ಆಟ ಆಟಕ್ಕೆ ಹೋಗಿದ್ನಾ: ಅಮೆರಿಕಾಗೆ ನೋ ಎಂದ ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ

Viral video: ಮಾಂಗಲ್ಯ ಸರ ತೆಗೆಯಲು ಬಂದ ವೃದ್ಧ ದಂಪತಿ: ನೆಟ್ಟಿಗರ ಮನಗೆದ್ದ ಅಂಗಡಿ ಮಾಲಿಕ

ಕೆಲಸದ ಅವಧಿ ಹೆಚ್ಚಳ: 10 ಗಂಟೆ ಕೆಲಸ ಮಾಡಿ ಅಂದ್ರೆ ಫ್ಯಾಮಿಲಿ ಏನು ಮಾಡ್ಬೇಕು

ಮುಂದಿನ ಸುದ್ದಿ
Show comments