Select Your Language

Notifications

webdunia
webdunia
webdunia
webdunia

ಜನಾರ್ಧನರೆಡ್ಡಿ ರಾಜಕೀಯಕ್ಕಿಳಿದರೆ ಹೈ.ಕ ಭಾಗದಲ್ಲಿ ಬಿಜೆಪಿಗೆ 20ಕ್ಕೂ ಅಧಿಕಸ್ಥಾನ– ಶ್ರೀರಾಮುಲು

ಜನಾರ್ಧನರೆಡ್ಡಿ ರಾಜಕೀಯಕ್ಕಿಳಿದರೆ ಹೈ.ಕ ಭಾಗದಲ್ಲಿ ಬಿಜೆಪಿಗೆ 20ಕ್ಕೂ ಅಧಿಕಸ್ಥಾನ– ಶ್ರೀರಾಮುಲು
ಬಳ್ಳಾರಿ , ಮಂಗಳವಾರ, 16 ಜನವರಿ 2018 (18:59 IST)
ಮಾಜಿ ಸಚಿವ ಗಾಲಿ ಜನಾರ್ಧನ ರೆಡ್ಡಿ ಅವರು ಸಕ್ರೀಯ ರಾಜಕಾರಣಕ್ಕೆ ಬಂದರೆ, ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಬಿಜೆಪಿ 20ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲವು ಸಾಧಿಸಲಿದೆ ಎಂದು ಬಿಜೆಪಿ ಸಂಸದ ಬಿ.ಶ್ರೀರಾಮುಲು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿಯಲ್ಲಿ ಮಾತನಾಡಿದ ಅವರು, ಗಾಲಿ ಜನಾರ್ಧನರೆಡ್ಡಿ ರಾಜಕೀಯಕ್ಕೆ ಬಂದರೆ ಬಳ್ಳಾರಿ, ರಾಯಚೂರು, ಕೊಪ್ಪಳ ಹಾಗೂ ಗದಗ ಜಿಲ್ಲೆಯಲ್ಲಿ ಬಿಜೆಪಿ ಗೆಲುವಿಗೆ ಅನುಕೂಲವಾಗಲಿದೆ ಎಂದಿದ್ದಾರೆ.

ಜನಾರ್ಧನ ರೆಡ್ಡಿ ಅವರು ಮನೆಯಲ್ಲಿ ಇದ್ದರೂ ಬಳ್ಳಾರಿಯಲ್ಲಿ ಬಿಜೆಪಿ ಒಂಭತ್ತು ಕ್ಷೇತ್ರಗಳಲ್ಲಿ ಗೆಲ್ಲಲಿದೆ. ಆದ್ದರಿಂದ ಬಿಜೆಪಿ ಹೈಕಮಾಂಡ್‌ ಜೊತೆಗೆ ಜನಾರ್ಧನರೆಡ್ಡಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಚರ್ಚೆ ನಡೆಸಲಾಗಿದೆ. ಶೀಘ್ರದಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
 
ಕೂಡ್ಲಿಗಿ ಶಾಸಕ ನಾಗೇಂದ್ರ ಹಾಗೂ ಹೊಸಪೇಟೆ ಶಾಸಕ ಆನಂದಸಿಂಗ್ ಅವರು ಅಸಮಾಧಾನಗೊಂಡಿದ್ದು, ಅವರ ಮನವೊಲಿಸುವ ಕಾರ್ಯ ನಡೆದಿದೆ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಜಿ.ಪರಮೇಶ್ವರ್ ಲೋಫರ್ ಎಂದ ಬಿಜೆಪಿ ಅಕಾಂಕ್ಷಿ