Webdunia - Bharat's app for daily news and videos

Install App

ವೋಟು ಹಾಕಲು ಬರದಿದ್ದರೆ, ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ: ಮಲ್ಲಿಕಾರ್ಜುನ ಖರ್ಗೆ ಭಾವುಕ ಮಾತು

Sampriya
ಬುಧವಾರ, 24 ಏಪ್ರಿಲ್ 2024 (20:31 IST)
Photo Courtesy X
ಅಫಜಲಪುರ: ಕರ್ನಾಟಕ ಮತ್ತು ಕಲಬುರ್ಗಿಗೆ ನಾನೇನಾದರೂ ಮಾಡಿದ್ದರೆ ವೋಟು ಹಾಕಲು ಬನ್ನಿ, ಇಲ್ಲದಿದ್ದರೆ ನಾನು ಸತ್ತ ಮೇಲೆ ನನ್ನ ಮಣ್ಣಿಗಾದರೂ ಬನ್ನಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾವುಕರಾದರು.

ಅಫಜಲಪುರದಲ್ಲಿ ಇಂದು ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ತಮ್ಮ ಅಳಿಯ, ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರ ಪರ ಮತಯಾಚಿಸಿ ಅವರು ಮಾತನಾಡಿದರು.

ಪಕ್ಷಕ್ಕೆ ಮತ ಹಾಕಲು ಬಯಸದಿದ್ದರೂ ಪರವಾಗಿಲ್ಲ. ನಾನು ಸತ್ತರೆ ನಮ್ಮ ಕೆಲಸಗಳನ್ನು ನೆನಪು ಮಾಡಿಕೊಂಡು ಮಣ್ಣು ಹಾಕಲು ಬನ್ನಿ. ಸತ್ತಾಗ ಸುಟ್ಟರೇ ಮೇಣದ ಬತ್ತಿ ಹಚ್ಚಲು ಬನ್ನಿ, ಹೂಳಿದ್ರೆ ಒಂದು ಹಿಡಿ ಮಣ್ಣು ಹಾಕಲು ಬನ್ನಿ. ಆಗ ಜನರು ನೋಡಪ್ಪ ಆತನ ಅಂತ್ಯಕ್ರಿಯೆಗೆ ಎಷ್ಟು ಜನ ಬಂದರೂ ಅಂತ ಹೇಳಬೇಕು ಎಂದು ಭಾವುಕರಾದರು.

ಇನ್ನೂ ನೀವೆನಾದರೂ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕದಿದ್ದರೆ ಕಲಬುರಗಿ ಜನರ ಮನಸಿನಲ್ಲಿ ನನಗೆ ಯಾವುದೇ ಸ್ಥಾನವಿಲ್ಲ ಎಂದರು.

ಕಲಬುರಗಿಯಲ್ಲಿ ಬಿಜೆಪಿಯ ಹಾಲಿ ಸಂಸದ ಉಮೇಶ್ ಜಾಧವ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿಯಾಗಿ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಅವರನ್ನು ಕಣಕ್ಕಿಳಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments